![](https://www.chandravallinews.com/wp-content/uploads/2023/02/WhatsApp-Image-2023-02-08-at-10.01.25-PM-1.jpeg)
i
ಆತ್ಮಹತ್ಯೆಗೆ ಶರಣಾದ ಕ್ರಿಯಾಶೀಲ ಉಪನ್ಯಾಸಕಿ…
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಅಮಿತಾ ಬಿವಿ(34)ಎಂದು ಗುರುತಿಸಲಾಗಿದೆ. ಅಮಿತಾ ತಾಯಿ ಮನೆಯಿಂದ ಬಂದು ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ ಮೂಲದ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿ ಅಮಿತಾ ಅತ್ಯಂತ ಕ್ರಿಯಾಶೀಲ ಮಹಿಳೆ, ಇವರು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅಮಿತಾ ಅವರು 12 ವರ್ಷಗಳಿಂದೆ ಲವ್ ಮ್ಯಾರೇಜ್ ಆಗಿದ್ದರು.