i
ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಕಾರ್ಯಕರ್ತರ ಗದ್ದಲ ಗಲಾಟೆ…
ಚಂದ್ರವಳ್ಳಿ ನ್ಯೂಸ್, ಭದ್ರಾವತಿ: DKS party workers
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದ ಪ್ರಜಾಧ್ವನಿ ಯಾತ್ರೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಭೆಯಲ್ಲಿ ಕಾರ್ಯಕರ್ತರ ಮಧ್ಯ ಗದ್ದಲ, ಗಲಾಟೆ ನಡೆದು ಹೋಗಿದೆ.
ಭದ್ರಾವತಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದಾಲೇ ವೇದಿಕೆ ಮೇಲಿದ್ದ ಕಾರ್ಯಕರ್ತರ ನಡುವೆ ಅದ್ಯಾವುದೋ ಕಾರಣಕ್ಕೆ ಗಲಾಟೆ ಶುರುವಾಯಿತು. ಗಲಾಟೆಗೆ ಕಾರಣವೇನು ಅನ್ನೋದು ಯಾರಿಗೂ ಗೊತ್ತಾಗಿಲ್ಲ ಆದರೆ ಶಿವಕುಮಾರ್ ಸೇರಿದಂತೆ ವೇದಿಕೆ ಮೇಲಿದ್ದ ನಾಯಕರೆಲ್ಲ ಗಲಾಟೆ ಮಾಡುತ್ತಿದ್ದ ಕಾರ್ಯಕರ್ತರನ್ನು ಶಾಂತಗೊಳಿಸಲು ಪ್ರಯತ್ನಿಸಿದರೂ ಅದು ಸಫಲವಾಗಲಿಲ್ಲ. ಪೋಡಿಯಂ ಬಳಿ ಮೈಕ್ ಹಿಡಿದು ನಿಂತಿದ್ದ ಕಾರ್ಯಕರ್ತರಿಬ್ಬರು ಎಲ್ಲರೂ ನಮ್ಮ ಕಾರ್ಯಕರ್ತರೇ ಅಂತ ಅರಚುತ್ತಾ ಹೇಳಿದರೂ ತಲೆಮೇಲೆ ಗಾಂಧಿಟೋಪಿ ಧರಿಸಿದ್ದ ಕಾರ್ಯಕರ್ತರು ಸಮಾಧಾನಗೊಳ್ಳಲಿಲ್ಲ. ಆಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆದರೂ ಗಲಾಟೆ ಮಾಡುತ್ತಿದ್ದ ಕಾರ್ಯಕರ್ತರು ಮಾತ್ರ ಕಿವಿಗೊಡಲಿಲ್ಲ. ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಇದು ಎಲ್ಲರಿಗೂ ಇರಿಸುಮುರಿಸು ಉಂಟು ಮಾಡಿತು.