i
ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಅದ್ಧೂರಿ ಸ್ವಾಗತ ನೀಡಿದ ಬಸವರಾಜನ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಆಯೋಜಿಸಲಾಗಿದ್ದ *ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರನ್ನು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜಾನುಕೊಂಡ ಸರ್ಕಲ್ ನಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಸ್. ಕೆ. ಬಸವರಾಜನ್ ಅದ್ಧೂರಿ ಸ್ವಾಗತ ಕೋರಿದರು.
ಹೊಸದುರ್ಗ, ಹೊಳಲ್ಕೆರೆ ಕಾರ್ಯಕ್ರಮ ಮುಗಿಸಿಕೊಂಡು ಬರಲು ರಾತ್ರಿ 8 ಗಂಟೆ ಆಗಿತ್ತು. ಆದರೆ ಎಸ್ ಕೆ ಬಸವರಾಜನ್ ಅಭಿಮಾನಿಗಳೊಂದಿಗೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ರವರು ಭಾಗವಹಿಸಿ ಅದ್ಧೂರಿ ಸ್ವಾಗತ ಕೋರಿದರು.