i
ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನ ವಿಜೇತ ಮಕ್ಕಳಿಗೆ ಸನ್ಮಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇರಳದಲ್ಲಿ ಜ.27 ರಂದು ನಡೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ವಿಜೇತರಾದ ಚಿತ್ರದುರ್ಗ ಡಾನ್ ಬಾಸ್ಕೋ ಆಂಗ್ಲ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಾದ ಸಫ್ವಾನ್ ಮತ್ತು ಶಾಶ್ವತ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿಪ್ಪೇಸ್ವಾಮಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬಾಲಕಿಯರ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಇವರನ್ನೂ ಸನ್ಮಾನಿಸಿ ಗೌರವಿಸಲಾಯಿತು.
ಇ.ಸಿ.ಓ ಇನಾಯತ್, ಎಂ.ಆರ್.ನಾಗರಾಜ್, ಸಮೀರಾ ಮತ್ತು ಮುಖ್ಯ ಶಿಕ್ಷಕರು, ಪೋಷಕರು ಹಾಜರಿದ್ದರು.