i
ಕೆಎಎಸ್ ಅಧಿಕಾರಿ ಪತ್ನಿಯ ಗಂಡ ಕಂದಾಯ ನಿರೀಕ್ಷಕ ನೇಣಿಗೆ ಶರಣು…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕಂದಾಯ ನಿರೀಕ್ಷಕ ಜಾಫರ್ ಫಿರಜಾದೆ(39) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಅಜಮ್ ನಗರದಲ್ಲಿ ಇವರ ಅಣ್ಣನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತ ಜಾಫರ್ ಕೆಎಎಸ್ ಅಧಿಕಾರಿ, ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿಯಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಮೃತ ಜಾಫರ್ ಫಿರಜಾದೆ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರ್ಯ ನಿಮಿತ್ತ ಪತ್ನಿ ರೇಷ್ಮಾ ತಾಳಿಕೋಟಿ ಬೆಂಗಳೂರಿಗೆ ತೆರಳಿದ್ದಾರೆ. ಇತ್ತೀಚೆಗಷ್ಟೇ ಖಾನಾಪುರ ತಹಶೀಲ್ದಾರ ಆಗಿದ್ದ ರೇಷ್ಮಾ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಆಗಿದ್ದರು. ಬೆಂಗಳೂರಿನಿಂದ ಇವರು ಬಂದ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ. ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.