i
ಜೆಡಿಎಸ್ ಸೇರ್ಪಡೆಗೆ ಮುಂದಾದ ಬಿಜೆಪಿ ಮುಖಂಡ, ಬಿಜೆಪಿ ಶಕ್ತಿ ಕೇಂದ್ರದಲ್ಲೇ ವಿಕೆಟ್ ಪತನ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಬಿಜೆಪಿ ಶಕ್ತಿ ಕೇಂದ್ರ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿಯ ಒಂದು ವಿಕೆಟ್ ಪತನವಾಗಿದೆ. ಬಿಜೆಪಿಗೆ ಗುಡ್ ಬೈ ಹೇಳಲು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ತುದಿಗಾಲ ಮೇಲೆ ನಿಂತಿದ್ದು ಅವರು ಜೆಡಿಎಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.
ಈಗಾಗಲೇ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಎರಡು ಬಾರಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಸದ್ದು ಮಾಡಿದ್ದಾರೆ. ಬಿಜೆಪಿ ನಾಯಕರ ವರ್ತನೆಯಿಂದ ಮುನಿಸಿಕೊಂಡಿರುವ ವೀರಭದ್ರಪ್ಪ ಹಾಲಹರವಿ ಪಕ್ಷಾಂತರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ವೀರಭದ್ರಪ್ಪ ಹಾಲಹರವಿ ಮಾಧ್ಯಮಗಳ ಜೊತೆ ಮಾತನಾಡಿ ಬಿಜೆಪಿ ಟಿಕೆಟ್ ಕೊಟ್ಟರೆ ಇಲ್ಲಿಯೇ ಇರುತ್ತೇನೆ. ಕೊಡದಿದ್ದಲ್ಲಿ ಪಕ್ಷಾಂತರ ಮಾಡೋದು ಖಚಿತ. ಕುಮಾರಸ್ವಾಮಿ ಅವರನ್ನು ಎರಡು ಬಾರಿ ಭೇಟಿಯಾಗಿ ಮಾತುಕತೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
2008 ಮತ್ತು 2013ರ ಅವಧಿಯಲ್ಲಿ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಿಂದ ವೀರಭದ್ರಪ್ಪ ಹಾಲಹರವಿ ಶಾಸಕರಾಗಿದ್ದರು. ಇದೀಗ ಅದೇ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಬಿಜೆಪಿ ಟಿಕೆಟ್ ಸಿಗೋದು ಡೌಟ್ ಅನ್ನುವಂತಾಗಿದೆ.