i
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನ 8ನೇ ತರಗತಿಗೆ ಪ್ರವೇಶ ಪರೀಕ್ಷೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜನವರಿ 2024ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಯ ಪ್ರವೇಶಕ್ಕಾಗಿ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 03, 2023 ರಂದು ನಡೆಸಲಾಗುವುದು.
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2024 ರಂತೆ 11ಳಿ ವರ್ಷದಿಂದ 13 ವರ್ಷದೊಳಗಿರುವ ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಸಾಮಾನ್ಯ ವರ್ಗಕ್ಕೆ ಶುಲ್ಕ ರೂ.107500/-ಗಳು ಹಾಗೂ ಪರಿಶಿಷ್ಟ ವರ್ಗ ಮತ್ತು ಪಂಗಡಕ್ಕೆ ರೂ 93,900/- ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.30,000/-ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿಧ್ಯಾರ್ಥಿಯು ಪದವೀಧರನಾದ ಮತ್ತು ವಿಧ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿಂತಿರುಗಿಸಲಾಗುವುದು.
ಅರ್ಜಿ ನಮೂನೆಗಳನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ – 248003 ಮೂಲಕ ಪಡೆಯಬಹುದು.
ಆನ್ ಲೈನ್ ಮೂಲಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳು & ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ.555/-ಗಳು ಆನ್ ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು. ವೆಬ್ ಸೈಟ್ www.rimc.gov.in. ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.
ಬೇಡಿಕೆ ಕರಡು ಕಳುಹಿಸುವ ಮೂಲಕ : ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನುಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಡಕಗಳೊಂದಿಗೆ ದಿನಾಂಕ 15-04-2023ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು – 25, ಇವರಿಗೆ, ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸುವುದು ಎಂದು ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರಾದ ಬ್ರಿಗೇಡಿಯರ್ ಎಮ್ ಬಿ ಶಶಿಧರ್ (ನಿವೃತ್ತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.