i
ಮೋದಿ-ಅಮಿತ್ ಶಾ-ನಡ್ಡಾ ನೂರು ಬಾರಿ ರಾಜ್ಯಕ್ಕೆ ಬಂದರೂ ಈ ಬಾರಿ ಜನರು ಬಿಜೆಪಿ ಸೋಲಿಸುತ್ತಾರೆ-ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಟಿಪ್ಪು ಸುಲ್ತಾನ್ ಚರ್ಚೆ ಸಿದ್ದಾಂತ ನಾ, ಸಾವರ್ಕರ್- ಗಾಂಧಿ ಚರ್ಚೆ ಸಿದ್ದಾಂತ ನಾ? ಬಿಜೆಪಿಗೆ ಜನರ ಪ್ರಚೋದನೆ ಮಾಡಿ, ದ್ವೇಷದ ರಾಜಕಾರಣ ಮಾಡುವುದೇ ಸಿದ್ದಾಂತ. ಸಿದ್ದರಾಮಯ್ಯ ಅವರನ್ನ ಮುಗಿಸಿ ಎಂಬುದು ಸಿದ್ದಾಂತ ನಾ? ಸಿದ್ದಾಂತ ಅಂದರೆ ಜನರ ಸಮಸ್ಯೆ ಪರಿಹಾರ ಮಾಡುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿತ್ರದುರ್ಗದ ಕ್ಯಾದಿಗೆರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ರಾಜಕೀಯ ಜ್ಞಾನ ಗೊತ್ತಿಲ್ಲ ಎಂದಿದ್ದೆ. JP ನಡ್ಡಾ ಅವರಿಗೂ ರಾಜಕೀಯ ಜ್ಞಾನ ಗೊತ್ತಿಲ್ಲ. ಮೋದಿ, ಅಮಿತ್ ಶಾ, ನಡ್ಡಾ ನೂರು ಬಾರಿ ಬಂದ್ರು, ಜನ ತೀರ್ಮಾನ ಮಾಡಿದ್ದು ಈ ಬಾರಿ ಬಿಜೆಪಿಯನ್ನ ಜನ ಸೋಲಿಸುತ್ತಾರೆ ಎಂದು ಹೇಳಿದರು.
ಮುಸ್ಲಿಂ ಓಲೈಕೆ ರಾಜಕೀಯ ಕಾಂಗ್ರೆಸ್ ಮಾಡುತ್ತೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಮನುಷತ್ವದ ರಾಜಕೀಯ ಮಾಡುತ್ತೇವೆ. ಎಲ್ಲರನ್ನ ಮನುಷ್ಯರು ಎಂದು ತೀರ್ಮಾನ ಮಾಡಿದ್ದೇವೆ. ಹಿಂದೂ- ಮುಸ್ಲಿಂ- ಕ್ರಿಶ್ಚಿಯನ್, ದಲಿತರು ಮನುಷ್ಯರೇ. ಕುಡಿಯುವ ನೀರಿನ ಘಟಕದಲ್ಲಿ ಬಾರಿ ಅವ್ಯವಹಾರ ಆಗಿದೆ. ನನ್ನ ಅವಧಿಯಲ್ಲಿ ಆಗಿದ್ದರೂ ಕೂಡಾ ತನಿಖೆ ಮಾಡಿ. ಏನೇ ಆರೋಪ ಮಾಡಿದರೂ ದಾಖಲೆ ಕೊಡಿ ಎಂದು ಹೇಳುತ್ತಾರೆ. ನನ್ನ ಅವಧಿಯಲ್ಲಿ 8 ಬಾರಿ ಸಿಬಿಐ ತನಿಖೆಗೆ ಕೊಟ್ಟಿದ್ದೆ. ನೀವು ತನಿಖೆ ಮಾಡಿ, ನಿಮ್ಮ ಕೈ ಯಾರು ಹಿಡಿದುಕೊಂಡಿಲ್ಲ. ನನ್ನ ಕಾಲದ ಭ್ರಷ್ಟಾಚಾರದ ದಾಖಲೆ ಇದ್ದರೇ ತನಿಖೆ ಮಾಡಿ. ಶೇ.40 ರಷ್ಟು ಕಮಿಷನ್ ಕೂಡಾ ತನಿಖೆ ಮಾಡಲು ಯಾಕೆ ಹಿಂದೇಟು ಹೊಡೆಯುತ್ತೀರಿ ಎಂದು ಪ್ರಶ್ನಿಸಿದರು.
ಶೋಭ ಕರಂದ್ಲಾಜೆ ಹೇಳಿಕೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿ ಮಾತನಾಡಿ ಶೋಭ ಕರಂದ್ಲಾಜೆ ಅವರು ಹೆಣ್ಣು ಮಗಳು ಜಾತಿ, ಧರ್ಮ ಅಂದರೆ ಅವರಿಗೆ ಗೊತ್ತಿಲ್ಲ. ನಾವು ಎಲ್ಲಾ ಜಾತಿ, ಧರ್ಮಗಳ ಮೇಲೆ ಗೌರವ ಇಟ್ಟುಕೊಂಡಿದ್ದೇವೆ. ಎಲ್ಲಾ ಜಾತಿ ಬಡವರಿಗೆ ಕಾರ್ಯಕ್ರಮ ನೀಡಿದ್ದು ನಮ್ಮ ಸರ್ಕಾರ. ಅನ್ನ ಭಾಗ್ಯ ಒಂದು ಜಾತಿ ಧರ್ಮಕ್ಕೆ ನಾವು ಕೊಟ್ಟಿಲ್ಲ. ಇಂದಿರಾ ಕ್ಯಾಂಟಿನ್ ಹಿಂದೂಗಳಿಗೆ ಮಾತ್ರ ಕೊಟ್ಟಿದ್ವಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯದಲ್ಲಿ IAS – IPS ಅಧಿಕಾರಿಗಳ ಜಗಳ ವಿಚಾರ ಕುರಿತು ಸರ್ಕಾರ ಕ್ರಮ ವಹಿಸಿದೆ ಈ ಬಗ್ಗೆ ಮಾತಾಡಲ್ಲ ಎಂದು ಹೇಳಿದರು.