i
ಜೆಡಿಎಸ್ ಅಧಿಕಾರಿಕ್ಕೆ ಬಂದರೆ ಇವರು ನೂರಕ್ಕೆ ನೂರು ಸಚಿವರಾಗಲಿದ್ದಾರೆ…
ಚಂದ್ರವಳ್ಳಿ ನ್ಯೂಸ್, ಹೊಳೆಹೊನ್ನೂರು:
2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಿಕ್ಕೆ ಬಂದರೆ ಶಿವಮೊಗ್ಗ ಗ್ರಾಮಾಂತರ ಶಾಸಕರನ್ನು ಸಚಿವರನ್ನಾಗಿ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಬುಧವಾರ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿ, ಶಿವಮೊಗ್ಗ ಗ್ರಾಮಾಂತರದ ಜನಪರ ಕಾಳಜಿಯುಳ್ಳ ನನ್ನ ಸಹೋದರಿ ಶಾರದಾ ಪೂರಾರಯ ನಾಯ್ಕ್ ಅವರನ್ನು ಅತಿ ಹೆಚ್ಚು ಮತಗಳಿಂದ ಆರಿಸಬೇಕು. ಇವರು ನೂರಷ್ಟು ಸಚಿವರಾಗಲಿದ್ದು ಕ್ಷೇತ್ರದ ಜನತೆಗೆ ಒಳ್ಳೆಯ ಅವಕಾಶಗಳು ದೊರೆಯಲಿವೆ ಎಂದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 30 ಹಾಸಿಗೆಯುಳ್ಳ ಸುಸಜ್ಜಿತ ಆರೋಗ್ಯ ಕೇಂದ್ರ ತೆರೆದು, ದಿನದ 24 ಗಂಟೆ ಉಚಿತ ಚಿಕಿತ್ಸೆ ಒದಗಿಸುವುದು ನಮ್ಮ ಗುರಿಯಾಗಿದೆ. ಭಗವಂತ ಅಧಿಕಾರ ಕೊಟ್ಟಾಗ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. 25 ಸಾವಿರ ಕೋಟಿ ಸಾಲ ಮನ್ನಾಮಾಡಿ 26 ಲಕ್ಷ ಕುಟುಂಬಗಳಿಗೆ ಅನುಕೂಲ ಮಾಡಿಕೊಡಲಾಗಿದೆ. 1 ಎಕರೆಗೆ 10 ಸಾವಿರದಂತೆ 10 ಎಕರೆ 1 ಲಕ್ಷದವರೆಗೆ ರೈತಬಂಧು ಯೋಜನೆಯಡಿ ಸರ್ಕಾರದ ವತಿಯಿಂದ ಧನಸಹಾಯ, ಸಣ್ಣಪುಟ್ಟವ್ಯಾಪಾರದಾರರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ತರಬೇತಿ ಜೊತೆಗೆ ಆರ್ಥಿಕ ಸಹಾಯ ನೀಡಲಾಗುವುದು ಎಂದು ಹೇಳಿದರು.
ಚುನಾವಣೆಯಲ್ಲಿ ಜಾತಿ, ಹಣದ ಆಮಿಷಗಳನ್ನು ಬಿಟ್ಟು ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದರೆ ಮಾತ್ರ ಈ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸಲಾವುದು ಎಂದರು.
ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದ ಪೂರಾರಯನಾಯ್ಕ, ಈ ಬಾರಿ ಕ್ಷೇತ್ರದ ಬದಲಾವಣೆಯ ನಿರೀಕ್ಷೆ ಇದೆ. ಹಿಂದೆಂದಿಗಿಂತಲೂ ಅಭೂತ ಪೂರ್ವ ಜನ ತಮ್ಮ ಪಕ್ಷದ ಬಗ್ಗೆ ಒಲವನ್ನು ತೋರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆಲುವು ನಿಶ್ಚಿತ ಎಂದರು.
ರಥಯಾತ್ರೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಮುಖಂಡ ಕಾಂತರಾಜ್, ಹೊಳೆಹೊನ್ನೂರು ಬ್ಲಾಕ್ ಅಧ್ಯಕ್ಷೆ ಗೀತಾ ಸತೀಶ್, ಎಪಿಎಂಸಿ ಸದಸ್ಯ ಸತೀಶ್, ಡಿ.ಎಚ್.ಪಾಲಾಕ್ಷಪ್ಪ, ಕೆ.ಆರ್.ಸತೀಶ್, ಶಕುಂತಲಾ ಹಾಲೇಶಪ್ಪ, ಜಿ.ಪಿ. ಶಿವಕುಮಾರ್, ಜಿ.ಎನ್. ಪರಶುರಾಮ., ದೀಪಕ್ ಪೂರಾರಯ ನಾಯ್ಕ, ವೆಂಕಟೇಶ್ ಸೇರಿ ಇತರರು ಇದ್ದರು.