i
ಬೆಸ್ಕಾಂ ಎಂಜಿನಿಯರ್ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಹರಿಹರ:
ಗುತ್ತಿಗೆದಾರನಿಂದ ಕಾಮಗಾರಿ ಮಂಜೂರಾತಿಗಾಗಿ ಲಂಚ ಪಡೆಯುವಾಗ ಹರಿಹರ ಬೆಸ್ಕಾಂ ಎಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕರಿಬಸಯ್ಯ ಲಂಚ ಪಡೆದು ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿರುವ ಆರೋಪಿ ಎನ್ನಲಾಗಿದೆ.
ಹರಿಹರದ ಬೆಸ್ಕಾಂ ಕಚೇರಿಯಲ್ಲಿ ಆರೋಪಿ ಕರಿಬಸಯ್ಯ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ವಿದ್ಯುತ್ ಗುತ್ತಿಗೆದಾರ ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪ ಅವರಿಂದ 15 ಸಾವಿರ ರೂ.ಗೆ ಕರಿಬಸಯ್ಯ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ ಒಂಬತ್ತು ಸಾವಿರ ರೂ ಲಂಚ ಪಡೆದಿದ್ದ ಆರೋಪಿ ಕರಿಬಸಯ್ಯ, ಇನ್ನುಳಿದ ಆರು ಸಾವಿರ ರೂ, ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಗಳಾದ ಆಂಜನೇಯ ತಂಡ ದಾಳಿ ಮಾಡಿತ್ತು. ಎಂಜನಿಯರ್ ಕರಿಬಸಯ್ಯರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.