i
ಶಾಲಾಗಳಲ್ಲಿ ಜಾತಿ, ಹೆಸರು ತಪ್ಪಾಗಿದ್ದರೆ ತಿದ್ದುಪಡಿ ಮಾಡಲು ಹೊಸ ಆದೇಶ ಹೊರಡಿಸಿದ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿಗಳ ಮೂಲ ಜಾತಿ, ಹೆಸರು/ ಪೋಷಕರ ಹೆಸರು, ಜನ್ಮದಿನಾಂಕ ಇತ್ಯಾದಿಗಳು ತಪ್ಪಾಗಿ ನಮೂದಾಗಿದ್ದರೆ ಸೂಕ್ತ ತಿದ್ದುಪಡಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿ ಅನುಕೂಲ ಮಾಡಿದೆ.
ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿಗಳ ಮಾಹಿತಿಗಳು ತಪ್ಪಾಗಿದ್ದ ಪಕ್ಷದಲ್ಲಿ ತಿದ್ದುಪಡಿ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಮಾರ್ಗದರ್ಶನವನ್ನು ನೀಡಿ ಅಧಿಕಾರವನ್ನು ಉಲ್ಲೇಖಿತ ಸುತ್ತೋಲೆಗಳಲ್ಲಿ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ(ಡಿಡಿಪಿಐ)ರಿಗೆ ಪ್ರತ್ಯಾಯೋಜಿಸಿ ಕ್ರಮವಹಿಸುವಂತೆ ಸೂಚಿಸಲಾಗುತ್ತಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಮಿತಿಯ ಸಭೆಯಲ್ಲಿ ತಿದ್ದುಪಡಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಪರಿಷ್ಕೃತ ಸುತ್ತೋಲೆ ಹೊರಡಿಸುವಂತೆ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಅಸ್ತಿತ್ವದಲ್ಲಿರುವ ಸುತ್ತೋಲೆಗಳನ್ನು ರದ್ದುಪಡಿಸಿ ಈ ಕೆಳಕಂಡಂತೆ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದು ತಪ್ಪು ಮಾಹಿತಿ ಹೊಂದಿರುವಂತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.