i
ಬಿಜೆಪಿ ಕಾಂಗ್ರೆಸ್ ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023ರ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿ ನಡೆದಿದ್ದು ಬಿಜೆಪಿ ಕಾಂಗ್ರೆಸ್ ಪಕ್ಷದ ನೂರಾರು ಮುಖಂಡರುಗಳು, ಕಾರ್ಯಕರ್ತರುಗಳು ಪಕ್ಷ ತೊರೆದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಶ್ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯ ವೈಖರಿ ಮೆಚ್ಚಿ, ರೈತರ ಆಡಳಿತ ನೀಡುವ ಭರವಸೆ ನೀಡಿ ಮಾಜಿ ಮುಖ್ಯಮಂತ್ರಿಗಳ ವಾಗ್ದಾನ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ರೀತಿಯ ಯೋಜನೆಗಳ ಅನುಷ್ಠಾನಕ್ಕೆ ಸಂಪೂರ್ಣ ಬೆಂಬಲ ನೀಡುವ ಸಲುವಾಗಿ ನೂರಾರು ಮುಖಂಡರು ಬಿಜೆಪಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಎಂ ರವೀಶ್ ಕುಮಾರ್ ಮಾತನಾಡಿ, ತುರುವನೂರು ಹೋಬಳಿ ಸೇರಿದಂತೆ ಇಡೀ ಕ್ಷೇತ್ರದಲ್ಲಿ ಜೆಡಿಎಸ್ ಪರ ಅಲೆ ಎದ್ದಿದ್ದು ನೂರಷ್ಟು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಅಲ್ಲದೆ ಈಗ ಸೇರ್ಪಡೆಯಾಗಿರುವ ಮುಖಂಡರು, ಕಾರ್ಯಕರ್ತರಿಂದಾಗಿ ಜೆಡಿಎಸ್ ಪಕ್ಷಕ್ಕೆ ಈ ಭಾಗದಲ್ಲಿ ಆನೆ ಬಲ ಬಂದಿದೆ ಎಂದು ಅವರು ತಿಳಿಸಿದರು.
ಚಿತ್ರದುರ್ಗ ತಾಲ್ಲೂಕಿನ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತುರುವನೂರು ಹೋಬಳಿಯ ಚಿಕ್ಕಗೂಂಡನಹಳ್ಳಿಯಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಕುಮಾರಸ್ವಾಮಿ ಆಡಳಿತದಲ್ಲಿ ಜನತೆ ನೆಮ್ಮದಿಯಾಗಿ ಇದ್ದರು ಎಂದು ಮತದಾರರು ಹೇಳುತ್ತಾರೆ. ಮುಂದಿನ ದಿನದಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದರೊಂದಿಗೆ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕಿದೆ ಎಂದರು. ಕಳೆದ ಚುನಾವಣೆಯಲ್ಲಿ ತುರುವನೂರು ಹೋಬಳಿಯ ಜನತೆ ಬಿಜೆಪಿ ಬೆಂಬಲಿಸಿದ್ದರು. ಅಲ್ಲದೆ ಮೂಲ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸಾಗರೋಪಾದಿಯಲ್ಲಿ ಸೇರುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ತುರುವನೂರು ಭಾಗದಲ್ಲಿ ಸುಮಾರು 70 ಕೋಟಿ ರೂಗಳ ಸಾಲ ಮನ್ನಾ ಮಾಡಿದ್ದಾರೆ ಇದು ಜನರಿಗೆ ತಲುಪಿದೆ ಆದರೆ ಇದನ್ನು ಮಾಡಿದ್ದು ಯಾರು ಎಂದು ಜನತೆ ಗೊತ್ತಿಲ್ಲ ಇದನ್ನು ತಿಳಿಸುವ ಕಾರ್ಯವನ್ನು ಪಕ್ಷದ ಮುಖಂಡರು ಕಾರ್ಯಕರ್ತರು ಮಾಡಬೇಕಿದೆ ಎಂದು ರವೀಶ್ ಕುಮಾರ್ ಕರೆ ನೀಡಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸುವ ಕಾರ್ಯವನ್ನು ಮಾಡಬೇಕಿದೆ. ಈಗ ಇರುವ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಜೆಡಿಎಸ್ ಪಕ್ಷದವರೇ ಆಗಿದ್ದಾರೆ ಇಲ್ಲಿಂದು ಹೋದವರೆ ಅಲ್ಲಿ ನಾಯಕರಾಗಿದ್ದಾರೆ. ಮುಂದಿನ ದಿನದಲ್ಲಿ ಜೆಡಿಎಸ್ ಪಚರತ್ನ ಯಾತ್ರೆ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಸಂಚಾರ ಮಾಡಲಿದೆ ಆಗ ಹೆಚ್ಚಿನ ಮಟ್ಟದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಆಗಮಿಸಿವುದರ ಮುಲಕ ಕುಮಾರಸ್ವಾಮಿಯವರ ಕೈಯನ್ನು ಬಲ ಪಡಿಸಬೇಕಿದೆ ಎಂದು ತಿಳಿಸಿದರು. ಚಳ್ಳಕೆರೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಿ.ಟಿ.ತಿಪ್ಪೇಸ್ವಾಮಿ ಮಾತನಾಡಿ, ತುರುವನೂರು ಹೋಬಳಿ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಈ ಬಾರಿ ತುರುವನೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವಂತೆ ಮಾಡಬೇಕಿದೆ. ಇದಕ್ಕೆ ಪಕ್ಷದ ಮುಖಂಡರು ಕಾರ್ಯಕರ್ತರು ಈಗಿನಿಂದಲೇ ಸನ್ನದ್ದರಾಗಬೇಕು ಎಂದು ಕರೆ ನೀಡಿದರು.
ಈ ಭಾಗದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಸೇರ್ಪಡೆಯಾಗಿರುವುದರಿಂದ ಪಕ್ಷ ತುಂಬಿ ತುಳುಕುತ್ತಿದೆ, ಕಳೆದ ಭಾರಿ ಚುನಾವಣೆಯಲ್ಲಿ ಸೋತ್ತಿದ್ದರು ಸಹಾ ರವೀಶ್ ಎದೆಗುಂದೆ ಧೈರ್ಯದಿಂದ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಮೂಲಕ ತಮ್ಮ ಅದೃಷ್ಠ ಪರೀಕ್ಷೆ ಮಾಡಿದ್ದಾರೆ ಎಂದು ತಿಳಿಸದರು.
ಈ ಸಂದರ್ಭದಲ್ಲಿ ರಮೇಶ್ ಕುಮಾರ್, ತಿಪ್ಪೇಸ್ವಾಮಿ, ಭೂಮ್ಮ ಲಿಂಗಣ್ಣ, ತಿಮ್ಮೇಶ್, ಹನುಮಂತಪ್ಪ, ಹೇಮಣ್ಣ, ಮಲ್ಲಿಕಾರ್ಜನ್, ವಿಜಯಣ್ಣ, ಸತೀಶ್ ವೇದಿಕೆಯಲ್ಲಿದ್ದರು.