i
ಕಾಂಗ್ರೆಸ್ ಪಕ್ಷದ ಬಿಗ್ ವಿಕೆಟ್ ಪತನ , ಹಳೆ ಗಂಡನ ಪಾದವೇ ಗತಿ ಎನ್ನುವಂತೆ ಬಿಜೆಪಿ ಸೇರಿದ ನಾಯಕ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮುರು:
ಕೋಟೆ ನಾಡು ಚಿತ್ರದುರ್ಗದಲ್ಲಿ ರಾಜಕೀಯ ಬೆಳವಣಿಗೆಗಳು ಸಾಕಷ್ಟ ನಡೆಯುತ್ತಿದ್ದು ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷದಲ್ಲಿದ್ದ ತಿಪ್ಪೇಸ್ವಾಮಿ ಅವರಿಗೆ ಬಿಜೆಪಿ ಅನಿವಾರ್ಯವಾಗಿತ್ತು. ಅದೇ ರೀತಿ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೂ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಪಕ್ಷ ಸೇರ್ಪಡೆ ಆಗುವುದು ಅನಿವಾರ್ಯವಾಗಿತ್ತು. ಹಾಗಾಗಿ ಹಳೆ ಗಂಡನ ಪಾದವೇ ಗತಿ ಎನ್ನುವಂತೆ ಬಿಜೆಪಿ ಪಕ್ಷ ತಿಪ್ಪೇಸ್ವಾಮಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಈ ಮೂಲಕ ತನ್ನ ಹಳೆ ಸ್ನೇಹಿತ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ಸ್ನೇಹ ಮತ್ತೊಮ್ಮೆ ಬೆಸೆದಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಟಿಕೆಟ್ ಕಾಯಂ ಮಾಡಿಕೊಂಡಿದ್ದಾರೆ.
ವಿಧಾನ ಪರಿಷದ್ ಸದಸ್ಯ ಕೆ.ಎಸ್.ನವೀನ್, ಚಿತ್ರದುರ್ಗ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಎ.ಮುರುಳಿ, ನಾಯಕನಹಟ್ಟಿ ಮಂಡಲದ ಅಧ್ಯಕ್ಷ ಈ. ರಾಮರೆಡ್ಡಿ, ಮೊಳಕಾಲ್ಮುರು ಮಂಡಲದ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ್ ಸೇರಿದಂತೆ ಬಿಜೆಪಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಉಪಸ್ಥಿತರಿದ್ದರು.