i
ಶೇ.17ರಷ್ಟು ವೇತನ ಹೆಚ್ಚಳ, ಮುಷ್ಕರ ಹಿಂಪಡೆದ ಸರ್ಕಾರಿ ನೌಕರರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ನೌಕರರ ಮುಷ್ಕರಕ್ಕೆ ಬೆಚ್ಚಿಬಿದ್ದ ರಾಜ್ಯ ಸರ್ಕಾರ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದರಿಂದಾಗಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಬಿಡಲಿದ್ದಾರೆ.
ಸರ್ಕಾರಿ ಆದೇಶ ಹೊರಡಿಸುವ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇವಲ ಬಾಯಿ ಮಾತಿನಲ್ಲಿ ಭರವಸೆ ನೀಡಿದ್ದರು, ಆದರೆ ಇದನ್ನು ಒಪ್ಪದ ನೌಕರರು ಅಧಿಕೃತ ಆದೇಶ ಹೊರಡಿಸಿದರೆ ಮಾತ್ರ ಮುಷ್ಕರ ಹಿಂಪಡೆಯುವುದಾಗಿ ಹೇಳಿದ್ದರಿಂದ ವಿಧಿಯಿಲ್ಲದೆ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಹೊರಡಿಸಿದ ಆದೇಶದ ನಂತರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ವಿಧಾನಸೌಧದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ಮುಷ್ಕರ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.