i
ಕಾಂಗ್ರೆಸ್ ಪಕ್ಷ ತೊರೆದು ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಮುಖಂಡರು, ಕಾರ್ಯಕರ್ತರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: congres-leaders-join-bjp
ಚಿತ್ರದುರ್ಗ ನಗರದ ಜಗಳೂರು ಮಹಲಿಂಗಪ್ಪ ಕಟ್ಟಡದಲ್ಲಿನ ಮೀಟಿಂಗ್ ಹಾಲ್ ನಲ್ಲಿ ಗುರುವಾರದಂದು ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷ ತೊರೆದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ ನಗರಸಭೆಯ ಮಾಜಿ ಸದಸ್ಯ ಎಸ್.ಬಿ.ಎಲ್ ಮಲ್ಲಿಕಾರ್ಜುನ ಮತ್ತು ಇತರೆ ಮುಖಂಡರು ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ನಂತರ ಮಾತನಾಡಿದ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಮೆಚ್ಚಿ ಕಾಂಗ್ರೆಸ್ ಪಕ್ಷದ ಮುಖಂಡ ಮಾಜಿ ನಗರಸಭೆ ಸದಸ್ಯ ಎಸ್ ಬಿಎಲ್ ಮಲ್ಲಿಕಾರ್ಜುನ್, ಮುಖಂಡರಾದ ರಾಘವೇಂದ್ರ, ವೆಂಕಟೇಶ್, ಜಗದೀಶ್ ಸೇರಿದಂತೆ ಮತ್ತಿತರರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದು ಸಂತೋಷದಿಂದ ಬರ ಮಾಡಿಕೊಂಡಿದ್ದೇನೆ. ಅತಿ ಕಡಿಮೆ ಅವಧಿಯಲ್ಲಿ ಚಿತ್ರದುರ್ಗದಲ್ಲಿ ಜನರ ನಿರೀಕ್ಷೆ ಮೀರಿ ಅಭಿವೃದ್ಧಿ ಮಾಡಲಾಗಿದೆ. ವಿವಿಧ ಪಕ್ಷಗಳ ಮುಖಂಡ ಬಿಜೆಪಿಗೆ ಬರಲು ಸಿದ್ದರಿದ್ದಾರೆ. ಆದರೆ ಬಿಜೆಪಿ ಗೆ ಸೇರ್ಪಡೆ ಆಗುವವರು ಬಿಜೆಪಿ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಬಂದರೆ ಯಾರು ಬೇಕಾದರು ಬರಬಹುದು. ಪ್ರತಿಯೊಬ್ಬರು ಪಕ್ಷಕ್ಕಾಗಿ ದುಡಿಯಬೇಕು. ಪಕ್ಷಕ್ಕೆ ದುಡಿದ ಎಲ್ಲರಿಗೂ ಅಧಿಕಾರ ಬರುತ್ತದೆ. ಚುನಾವಣೆ ಕೆಲ ದಿನಗಳು ಇದ್ದು ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು. ಬಿಜೆಪಿ ಪಕ್ಷದಲ್ಲಿ ಎಲ್ಲರಿಗೂ ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನಮಾನ ಮತ್ತು ಅವಕಾಶ ನೀಡುತ್ತದೆ ಎಂದು ತಿಳಿಸಿದರು.
ಯಾವುದೇ ಜಾತಿಗೆ ಸಿಮೀತವಾಗದೇ ಎಲ್ಲಾ ಜಾತಿ ಜನಾಂಗದವರಿಗೆ ಅಧಿಕಾರ ನೀಡುವ ಕೆಲಸ ಬಿಜೆಪಿ ಮಾಡುತ್ತದೆ. ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ನಮ್ಮ ಸರ್ಕಾರದ ಸಾಧನೆ ಜನರ ಮುಂದಿಡುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ಪ್ರಭಾರಿ ಗೀತಾ ಧನಂಜಯ್, ಜಿಲ್ಲಾಧ್ಯಕ್ಷ ಎ.ಮುರುಳಿ, ನಗರಾಧ್ಯಕ್ಷ ನವೀನ್, ಕಲ್ಲೇಶಯ್ಯಸ್ವಾಮಿ ಮತ್ತಿತರರು ಇದ್ದರು.