i
ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಭೈರೇಶ್ ಪಟೇಲ್ ನೇಮಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಕಚೇರಿಯಲ್ಲಿ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡರ ಆದೇಶದ ಮೇರೆಗೆ ಹಿರಿಯೂರು ತಾಲೂಕಿನ ಪರಮೇನಹಳ್ಳಿಯ ಭೈರೇಶ್ ಪಟೇಲ್ ರವರನ್ನು ಚಿತ್ರದುರ್ಗ ಜಿಲ್ಲೆಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ ಆದೇಶ ಪತ್ರ ವಿತರಣೆ ಮಾಡಲಾಗಿದೆ. ವಿವಿಧ ಘಟಕಗಳ ಪದಾಧಿಕಾರಿಗಳು ನಿಷ್ಠೆ ಮತ್ತು ಪ್ರಮಾಣಿಕತೆಯಿಂದ ಪಕ್ಷ ಬಲವರ್ಧನೆ ಮಾಡುವಂತೆ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಕಾರ್ಮಿಕ ವಿಭಾಗದ ಹಲವು ಪ್ರಮುಖ ಮುಖಂಡರು ಹಾಜರಿದ್ದರು.