i
ರೈತರ ಎಲ್ಲಾ ಸಾಲ ಮನ್ನಾ– ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕರ್ನಾಟಕ ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲ ಮನ್ನಾ ಮಾಡಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ದಾವಣಗೆರೆಯಲ್ಲಿ ನಡೆದ ಆಪ್ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಶೇ. 40ರ ಕಮಿಷನ್ ಸರ್ಕಾರ. ಕರ್ನಾಟಕದಲ್ಲಿರುವ ಶೇ. 40ರ ಬಿಜೆಪಿ ಸರ್ಕಾರ ಕಿತ್ತೊಸೆಯಬೇಕು, ಅದಕ್ಕಾಗಿ ನಾವು ಇಲ್ಲಿಗೆ ಬಂದಿದ್ದೇವೆ. ಅಮಿತ್ ಶಾ ಕರ್ನಾಟಕಕ್ಕೆ ಬಂದು ದೊಡ್ಡ ಮಾತನಾಡುತ್ತಾರೆ, ಈ ಜಿಲ್ಲೆಯ ಬಿಜೆಪಿ ಶಾಸಕನ ಪುತ್ರ 8 ಕೋಟಿ ಜೊತೆ ಸಿಕ್ಕಿ ಹಾಕಿಕೊಂಡಿದ್ದಾನೆ. ನಮಗೆ ಒಂದು ಅವಕಾಶ ಕೊಡಿ ನಾವು ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಸಾಲಮನ್ನಾ ಮಾಡುತ್ತೇವೆ, ಬಡವರಿಗಾಗಿ ಜನಪರ ಯೋಜನೆ ತರುತ್ತೇವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಶೇ.40ರ ಕಮಿಷನ್ ಸರ್ಕಾರ ಕಿತ್ತೊಸೆಯಬೇಕು. ಅದಕ್ಕಾಗಿ ಆಮ್ ಆದ್ಮಿ ಪಕ್ಷ ಕರ್ನಾಟಕಕ್ಕೆ ಬಂದಿದೆ. ದೆಹಲಿ, ಪಂಜಾಬ್ ನಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದಲ್ಲೂ ಪ್ರಮಾಣಿಕವಾಗಿ ಸರ್ಕಾರ ನೀಡುವ ಗುರಿ ಇದೆ. ಕರ್ನಾಟಕದಲ್ಲೂ ಆಮ್ ಆದ್ಮಿ ಪಕ್ಷದ ಬಲವರ್ಧನೆ ಮಾಡುತ್ತಿದ್ದೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದರು.