i
ರೈತರ ಮಕ್ಕಳನ್ನು ಮದುವೆ ಆಗುವ ಹೆಣ್ಣಿಗೆ 2 ಲಕ್ಷ ರೂ.ಸಹಾಯಧನ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಜೆಡಿಎಸ್ ವತಿಯಿಂದ ಆಯೋಜಿಸಿದ್ದ ಪಂಚರತ್ನ ರಥಯಾತ್ರೆಗೆ ನಿರೀಕ್ಷೆ ಮೀರಿದ ಜನ ಸೇರಿದ್ದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತಿಪಟೂರು ಕ್ಷೇತ್ರದ ಹಾಲ್ಕುರಿಕೆ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆಯು ಬೃಹತ್ ರೋಡ್ ಶೋ ಮೂಲಕ ನಡೆಯಿತು.
ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕೆಂಪಮ್ಮ ದೇವಿ ದೇವಾಲಯದ ಬಳಿ ಬೃಹತ್ ಹಾರ ಹಾಕಿ, ಪೂರ್ಣ ಕುಂಭ ಕಳಶ ಹೊತ್ತು ಮಹಿಳೆಯರು ಹಾಗೂ ವಿವಿಧ ಕಲಾತಂಡಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ರೋಡ್ ಶೋ ವೇಳೆ ಜೆಡಿಎಸ್ ಅಭ್ಯರ್ಥಿ ಕೆ ಟಿ.ಶಾಂತಕುಮಾರ್ ಹಾಗೂ ಜಿಲ್ಲಾಧ್ಯಕ್ಷ ಅಂಜಿನಪ್ಪ ಹೆಚ್.ಡಿ ಕುಮಾರಸ್ವಾಮಿ ಸಾಥ್ ನೀಡಿದರು.
ರೋಡ್ ಶೋ ವೇಳೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡಲ್ಲ. ರೈತರ ಮಕ್ಕಳ ಜೊತೆ ಮದುವೆಯಾದರೆ 2 ಲಕ್ಷ ರೂ. ಸಹಾಯಧನ ಕೊಡುವ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.