i
ಅಭ್ಯರ್ಥಿಗಳಿಗೆ 1750 ರೂ.ಗಳ ಮಾಸಿಕ ಶಿಷ್ಯ ವೇತನದೊಂದಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023-24ನೇ ಸಾಲಿನಲ್ಲಿ ಮೇ 02, 2023ರಿಂದ ಫೆಬ್ರವರಿ 29, 2024ರವರೆಗೆ ತೋಟಗಾರಿಕೆ ತರಬೇತಿ ಕೇಂದ್ರ, ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆಯುವ 10 (ಹತ್ತು) ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1750-00 ಗಳ ಮಾಸಿಕ ಶಿಷ್ಯ ವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ)ವನ್ನು ನೀಡಲಾಗುವುದು. ಬೆಂಗಳೂರು ಗಾಮಾಂತರ, ಬೆಂಗಳೂರು ನಗರ, ತುಮಕೂರು. ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವಾಸವಾಗಿರುವವರು ಮಾತ್ರ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ.
ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಇತರರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ಇರುತ್ತದೆ.
ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು, ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ಮೇಲೆ ತಿಳಿಸಿದ ವಿವರಗಳೊಂದಿಗೆ ಇತರೆ ದಾಖಲೆಗಳಾದ Discharge book copy, personal pension order copy. Ex.serviceman ID card copy ಗಳನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು. ತರಬೇತಿಗೆ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರ ಬೇಕು. ಈ ಬಗ್ಗೆ ಪ್ರಮಾಣ ಪತ್ರವನ್ನು ಸಲ್ಲಿಸುವುದು.
ಅರ್ಜಿಗಳನ್ನು ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) / ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ರವರ ಕಛೇರಿಯಲ್ಲಿ ಅಥವಾ ಇಲಾಖೆ ವೆಬ್ಸೈಟ್ https://horticulture dir.karnataka.gov.in ನಲ್ಲಿ ಮಾಚ್ 23ರಿಂದ ಏಪ್ರಿಲ್ 12 ರ ವರೆಗೆ ಪಡೆಯಬಹುದಾಗಿರುತ್ತದೆ.
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.30 ಮತ್ತು ಮಾಜಿ ಸೈನಿಕರು/ಪರಿಶಿಷ್ಟ ಜಾತಿ / ಪಂಗಡದ ಅಭ್ಯರ್ಥಿಗಳಿಗೆ ರೂ.15/- ಗಳ ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ (IPO) / ಡಿಮ್ಯಾಂಡ್ ಡಾವ್ನ್ (DD)ನ್ನು ಆಯಾಯ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರು (ಜಿಲ್ಲಾ ಪಂಚಾಯತ್) ರವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು. ಅಭ್ಯರ್ಥಿಗಳನ್ನು ಏಪ್ರಿಲ್ 15 ರಂದು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ದಾಖಲಾತಿಗಳೊಂದಿಗೆ ಏಪ್ರಿಲ್ 12 ಸಂಜೆ 5 ಗಂಟೆಯೊಳಗೆ ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) / ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ರವರ ಕಛೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) / ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಅಥವಾ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್ ಬಾಗ್, ಬೆಂಗಳೂರು, ದೂರವಾಣಿ ಸಂಖ್ಯೆ 080-22240444 / 9741560256/8197792966 ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.