i
ಕಾಂಗ್ರೆಸ್ ಬಿಜೆಪಿ ಮುಖಂಡರು ಪಕ್ಷ ತೊರೆದು ಜೆಡಿಎಸ್ ಸೇರ್ಪಡೆ-ಅಭ್ಯರ್ಥಿ ರವೀಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜೆಡಿಎಸ್ ಅಧಿಕಾರಕ್ಕೆ ತರುವುದರೊಂದಿಗೆ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಬೇಕಿದೆ ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ ರವೀಶ್ ಕುಮಾರ್ ತಿಳಿಸಿದರು.
ಚಿತ್ರದುರ್ಗ ತಾಲೂಕಿನ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮುದ್ದಾಪುರ ಗ್ರಾಮ ಪಂಚಾಯಿತಿ ಹಿರೇಕಬ್ಬಿಗೇರೆ ಗ್ರಾಮದ ಸುತ್ತಾ–ಮುತ್ತಲಿನ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಿರೇಕಬ್ಬಿಗೇರೆ ಗ್ರಾಮದಲ್ಲಿ ನಡೆದ ಜೆಡಿಎಸ್ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾದ ಮುಖಂಡರಿಗೆ ಜೆಡಿಎಸ್ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮಾಡಿದ ವಿವಿಧ ರೀತಿಯ ಯೋಜನೆ ಹಾಗೂ ಸಾಲ ಮನ್ನಾ ಕಾರ್ಯಕ್ರಮಗಳು ನಮಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ. ವಯೋವೃದ್ಧರಿಗೆ 5 ಸಾವಿರ ಪಿಂಚಣಿ, ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ, ಪ್ರತಿ ಎಕರೆಗೆ 10 ಸಾವಿರ ರೂ.ಗಳ ಸಹಾಯಧನ ಸೇರಿದಂತೆ ಮತ್ತಿತರ ಯೋಜನೆಗಳನ್ನು ಜೆಡಿಎಸ್ ಮಾಡಲಿದೆ ಎಂದು ಹೇಳಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಪಕ್ಷ ಗೆಲ್ಲಿಸುವ ಕಾರ್ಯ ಮಾಡಬೇಕಿದೆ. ಮುಂದಿನ ದಿನದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಚಾರ ಮಾಡಲಿದೆ ಆಗ ಹೆಚ್ಚಿನ ಮಟ್ಟದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಆಗಮಿಸುವುದರ ಮೂಲಕ ಕುಮಾರಸ್ವಾಮಿಯವರ ಕೈ ಬಲ ಪಡಿಸಬೇಕಿದೆ ಎಂದು ತಿಳಿಸಿದರು.
ಚಳ್ಳಕೆರೆ ಜೆಡಿಎಸ್ ತಾಲೂಕು ಅಧ್ಯಕ್ಷ ಡಿ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಈ ಭಾಗದಲ್ಲಿ ಬೇರೆ ಪಕ್ಷದ ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರಿಂದ ಬಲ ಬಂದಿದೆ. ಈ ಬಾರಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವಂತೆ ಮಾಡಬೇಕಿದೆ. ಇದಕ್ಕೆ ಪಕ್ಷದ ಮುಖಂಡರು ಕಾರ್ಯಕರ್ತರು ಈಗಿನಿಂದಲೇ ಸನ್ನದ್ದರಾಗಬೇಕಿದೆ. ಈ ಮುಂಚೆ ಈ ಭಾಗದಲ್ಲಿ ಜೆಡಿಎಸ್ಗೆ ಯಾರು ಸಹಾ ಬೆಂಬಲ ನೀಡಿರಲಿಲ್ಲ ಆದರೆ ಈಗ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ತುಂಬಿ ತುಳುಕುತ್ತಿದೆ, ಕಳೆದ ಭಾರಿ ಚುನಾವಣೆಯಲ್ಲಿ ಸೋತ್ತಿದ್ದರು ಸಹಾ ರವೀಶ್ ಎದೆಗುಂದೆ ಧೈರ್ಯದಿಂದ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದರ ಮೂಲಕ ತಮ್ಮ ಅದೃಷ್ಠ ಪರೀಕ್ಷೆ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ರಾಯನಹಳ್ಳಿ ಶಶಿಧರ್, ಕಾಂತರಾಜ್, ನಾರಪ್ಪ, ಅಜ್ಜಣ್ಣ, ಓಂಕಾರಪ್ಪ, ಹಿರೇಕಬ್ಬಿಗೆರೆ ಕಾಂತರಾಜ್ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿ, ಸೂರೇನಹಳ್ಳಿ, ಚಿಕ್ಕ ಕಬ್ಬಿಗೆರೆ ಗೊಲ್ಲರಹಟ್ಟಿ, ಮುದ್ದಾಪುರ, ದೂಡ್ಡಘಟ್ಟ, ಬೆಳಗಟ್ಟ, ಪೆಲೂರಹಟ್ಟಿ, ಲಂಬಾಣಿಹಟ್ಟಿಯ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾದರು.