i
ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮುಖಂಡರು…
ಚಂದ್ರವಳ್ಳಿ ನ್ಯೂಸ್, ಪಾವಗಡ:
ಚುನಾವಣೆ ಸಮೀಪವಾಗುತ್ತಿದ್ದಂತೆ ಪಕ್ಷಾಂತರಿಗಳ ಪರ್ವ ಜೋರಾಗಿ ನಡೆಯುತ್ತಿದ್ದು ಪಾವಗಡ ವಿಧಾನಸಭಾ ಕ್ಷೇತ್ರದ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹಾಗೂ ಇತರೆ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪಾವಗಡ ತಾಲೂಕಿನ ಜಾಲೋಡು ಗ್ರಾಮದ ಮುಖಂಡರಾದ ದೇವರಾಜ, ಶಿವಶಂಕರ, ಗಜೇಂದ್ರ, ಮಹೀಂದ್ರ, ಜೆ.ಸಿ.ವೀರೇಶ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಸೇರ್ಪಡೆಯಾದರು.
ಜೆಡಿಎಸ್ ಮುಖಂಡರಾದ ಶಿವಣ್ಣ, ತಿಪ್ಪೇಸ್ವಾಮಿ, ಯುವ ಮುಖಂಡ ಪರಮೇಶ್ ಜೆ.ಕೆ.ಈರಣ್ಣ, ಹೊನೂರಪ್ಪ, ಎ.ತಿಪೇಸ್ವಾಮಿ ಸೇರಿದಂತೆ ಹಲವು ಮುಖಂಡರು ಇದ್ದರು.