i
ಪಕ್ಷ ವಿರೋಧಿ ಚಟುವಟಿಕೆ ಕೆಪಿಸಿಸಿ ಸದಸ್ಯ ಸೇರಿ ಹಲವರ ಅಮಾನತು…
ಚಂದ್ರವಳ್ಳಿ ನ್ಯೂಸ್, ಹಗರಿಬೊಮ್ಮನಹಳ್ಳಿ:
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಕೆಪಿಸಿಸಿ ಸದಸ್ಯ ಎಂ.ಎಂ.ಜೆ.ಹರ್ಷವರ್ಧನ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರನ್ನು ಅಮಾನತುಗೊಳಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಜರುಗಿದೆ.
ಕಾಂಗ್ರೆಸ್ ಪಕ್ಷದ ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ್, ಬುಡ್ಡಿ ಬಸವರಾಜ ಹಾಗೂ ಕನ್ನಿಹಳ್ಳಿ ಚಂದ್ರಶೇಖರ್ ಅವರನ್ನು ಸಹ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಶಿವಯೋಗಿ ಮಾಹಿತಿ ನೀಡಿದರು.
ಹಗರಿಬೊಮ್ಮನಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಾನತುಗೊಂಡಿರುವ ಈ ನಾಲ್ವರು ಮುಖಂಡರು ಶಾಸಕ ಭೀಮ ನಾಯ್ಕ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ವಿವಿಧ ಸಭೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ವರ್ತಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಹಗರಿಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಪುರಸಭೆ ಸದಸ್ಯರಾದ ಪವಾಡಿ ಹನುಮಂತಪ್ಪ, ಎಂ.ಮರಿರಾಮಪ್ಪ, ಅಕ್ಕಿ ತೋಟೇಶ್ ಸೇರಿದಂತೆ ಇತರರು ಇದ್ದರು.