![](https://www.chandravallinews.com/wp-content/uploads/2023/03/bus.jpg)
i
ಬಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ದಿಢೀರ್ ಬಂದ ಮೂರ್ಛೆ, ಡಿವೈಡರ್ ಏರಿದ ಬಸ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ದಿಢೀರ್ ಮೂರ್ಛೆ ಬಂದು ನಿಯಂತ್ರಣ ತಪ್ಪಿದ ಸರ್ಕಾರಿ ರಾಜಹಂಸ ಬಸ್ ಡಿವೈಡರ್ ಏರಿದ್ದು ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಚಿತ್ರದುರ್ಗ ನಗರದ ಮಾದರ ಚನ್ನಯ್ಯ ಮಠದ ಬಳಿ ಈ ದುರ್ಘಟನೆ ಸಂಭವಿಸಿದ್ದು ದಾವಣಗೆರೆಯಿಂದ ಚಿತ್ರದುರ್ಗ ಕಡೆ ರಾಜಹಂಸ ಬಸ್ ಬರುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಅನಾಹುತ ಸಂಭವಿಸಿಲ್ಲ, ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದಾರೆ.