
ಚಿತ್ರನಟಿ ರಮ್ಯಾ ರಾಜ್ಯ ರಾಜಕಾರಣಕ್ಕೆ ಎಂಟ್ರಿ? ರಮ್ಯಾ vs ಎಚ್ ಡಿಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಸಂಸದೆ, ಚಿತ್ರನಟಿ ರಮ್ಯಾ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡಲಿದ್ದು ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಸುದ್ದಿ ಎಲ್ಲ ಕಡೆ ಹರಿದಾಡುತ್ತಿದೆ.
ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸುವಂತೆ ರಮ್ಯಾ ಅವರನ್ನು ಸಜ್ಜುಗೊಳಿಸಲು ಸಿದ್ಧ ನಡೆಸಲಾಗಿದೆ. ಪದ್ಮನಾಭನಗರ , ಚನ್ನಪಟ್ಟಣ ಕ್ಷೇತ್ರದ ಲೆಕ್ಕಾಚಾರ ಮಾಡಿರುವ ಕಾಂಗ್ರೆಸ್ ನಾಯಕರು. ಪ್ರಮುಖ ಒಕ್ಕಲಿಗ ಸಮೂದಾಯದ ಮತಸೆಳೆಯಲು ಪ್ಲಾನ್ ಮಾಡಲಾಗಿದೆ. ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಮಧ್ಯದಲ್ಲಿ ಪೈಪೋಟಿ ಇದೆ. ಒಕ್ಕಲಿಗ ಮತ್ತು ಅಹಿಂದ ಮತ ಲೆಕ್ಕಾಚಾರದಲ್ಲಿ ರಮ್ಯಾ ಸೂಕ್ತ ಜೊತೆಗೆ ಸಚಿವ ಆರ್.ಅಶೋಕ ವಿರೋಧಿ ಮತಗಳ ಕ್ರೋಢಿಕರಣದ ಲೆಕ್ಕಾಚಾರವನ್ನು ಕಾಂಗ್ರೆಸ್ ಮಾಡಿದೆ ಎನ್ನಲಾಗಿದೆ. ಇದಲ್ಲದೆ ರಮ್ಯಾ ಅವರನ್ನು ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ಕ್ಷೇತ್ರದಲ್ಲಿ ಕಣಕ್ಕೆ ಇಳಿಸು ಉದ್ದೇಶ ಇದೆ ಎನ್ನಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ವಿರುದ್ಧ ರಮ್ಯಾ ಅವರನ್ನು ಸ್ಪರ್ಧೆಗಿಳಿಸಲು ಚಿಂತನೆ ಮಾಡಲಾಗಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಧಾರಗಳು ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.