i
ಬಿಜೆಪಿ ಮುಖಂಡ ದೇವೇಂದ್ರರೆಡ್ಡಿ ನಿಧನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಲ್ಲಿನ ಜೋಗಿಮಟ್ಟಿ ರಸ್ತೆಯ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿ ದೇವೇಂದ್ರರೆಡ್ಡಿ (67) ಶನಿವಾರ ಹೃದಯಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಜಟ್ಪಟ್ ನಗರದ ರುದ್ರಭೂಮಿಯಲ್ಲಿ ಭಾನುವಾರ ಅಂತ್ಯಕ್ರಿಯೆ ನೆರವೇರಿತು.
1984ರಲ್ಲಿ ಜನಸಂಘದ ಮೂಲಕ ರಾಜಕೀಯ ಪ್ರವೇಶಿಸಿದ್ದ ದೇವೇಂದ್ರ ರೆಡ್ಡಿ, ಸಂಘಟನೆ, ನಿಷ್ಠೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ವಿವಿಧ ಹುದ್ದೆಗಳ ಮೂಲಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಚಿತ್ರದುರ್ಗ ತಾಲೂಕು ಗ್ರಾಮಾಂತರ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಲಾಲ್ಕೃಷ್ಣ ಅಡ್ವಾಣಿ, ವಾಜಪೇಯಿ ನೇತೃತ್ವದಲ್ಲಿ ರಥಯಾತ್ರೆ ಜಿಲ್ಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಯಾತ್ರೆ ಯಶಸ್ವಿಗೆ ಶ್ರಮಿಸಿದ್ದರು.