i
ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರೈತರ, ಮಹಿಳೆಯರ ಸಾಲ ಮನ್ನಾ, ಉಚಿತ ವೈದ್ಯಕೀಯ ಸೇವೆ-ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಮೈಸೂರು:
2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್’ಅಧಿಕಾರಕ್ಕೆ ಬಂದರೆ ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುವುದರ ಜೊತೆಯಲ್ಲಿ ರೈತರು ಮತ್ತು ಮಹಿಳಾ ಸ್ವಸಹಾಯ ಸಂಘಗಳ ಎಲ್ಲ ಸಾಲವನ್ನ ಮನ್ನಾ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದರು.
ಮೈಸೂರು ತಾಲೂಕಿನ ಉತ್ತನಹಳ್ಳಿ ಬಳಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮಾತನಾಡಿದರು. ರಾಜ್ಯದ ಜನರ ಆರೋಗ್ಯ ವೆಚ್ಚವನ್ನ ಸರ್ಕಾರವೇ ಭರಿಸುತ್ತದೆ, ಅದೇ ರೀತಿ ಕಿಡ್ನಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮಾಡುತ್ತೇವೆ, ಬಡವರ ಮಕ್ಕಳಿಗೆ ಶ್ರೀಮಂತರ ಮಕ್ಕಳ ಹಾಗೆ ಸಮಾನವಾದ ಶಿಕ್ಷಣ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ದಿನದಿಂದ ದಿನಕ್ಕೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಬಿಜೆಪಿ ಸರ್ಕಾರ ಜನರಿಗೆ ಏನೂ ಮಾಡಿಲ್ಲ ಎಂದು ಕಿಡಿಕಾರಿದರು. 90 ದಿನ ಪಂಚರತ್ನ ಯಾತ್ರೆ ನಡೆದಿದೆ. ಈ ಬಾರಿ ಜೆಡಿಎಸ್ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿದೆ ಎಂದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ , ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ನನ್ನ ರಾಜಕೀಯ ಬೆಳವಣಿಗೆಗೆ ಮಂಡ್ಯ, ಮೈಸೂರು ಜನ ಕಾರಣ. ರೈತರ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ರೈತರೊಬ್ಬರು ನನಗೆ ಮನವಿ ಸಲ್ಲಿಸಿದ್ದರು. ಮುಂದಿನ ದಿನಗಳಲ್ಲಿ ರೈತರ ಮಕ್ಕಳಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದು ಹೇಳಿದರು.
120 ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಇದಕ್ಕೆ ನಿಮ್ಮ ಆಶೀರ್ವಾದ ಬೇಕು. ಪಂಚರತ್ನ ಯಾತ್ರೆ ನಮ್ಮ ಸ್ವಾರ್ಥಕ್ಕಾಗಿ ಮಾಡಿದ್ದಲ್ಲ, ಇದು ನಿಮ್ಮ ಕಾರ್ಯಕ್ರಮ. ಹಗಲು ರಾತ್ರಿ ನಿದ್ದೆ ಇಲ್ಲದೇ ನಾವು 90 ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ, ಈ ಕಾರ್ಯಕ್ರಮ ಇಡೀ ರಾಜ್ಯಕ್ಕೆ ತಲುಪಬೇಕು ಎಂದು ಕುಮಾರಸ್ವಾಮಿ ಹೇಳಿದರು.