i
ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿಯ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿಯ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶ ಮಾರ್ಚ್ 26ರಂದು ಭಾನುವಾರ ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಡೆಯಲಿದ್ದು, ಚಾಮುಂಡೇಶ್ವರಿ ಶಾಸಕ ಜಿ.ಟಿದೇವೇಗೌಡರ ನೇತೃತ್ವದಲ್ಲಿ ಸಕಲ ಸಿದ್ಧತೆಗಳು ನಡೆದಿವೆ.
ಚಾಮುಂಡಿ ಬೆಟ್ಟದ ತಪ್ಪಲಲ್ಲಿ ನಡೆಯುತ್ತಿರುವ ಪಂಚರತ್ನ ಸಮಾರೋಪ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು, ಕಾರ್ಯಕರ್ತರು ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಸಿ.ಎಂ ಇಬ್ರಾಹಿಂ ಸೇರಿದಂತೆ ಮತ್ತಿತರ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಮಾರ ಪರ್ವ ಸಮಾವೇಶವನ್ನು ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಆಯೋಜಿಸಿತ್ತು. ಆಗ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗುವ ಅವಕಾಶ ಕುಮಾರಸ್ವಾಮಿಗೆ ಒಲಿದು ಬಂದಿತ್ತು. ಇದೀಗ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ಈ ಬಾರಿಯೂ ಅದೃಷ್ಟ ಒಲಿಯುವ ನಿರೀಕ್ಷೆ ಜೆಡಿಎಸ್ನಲ್ಲಿದೆ.