i
ಕಾಡುಗೊಲ್ಲ ಶಿವು ಯಾದವ್ ಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಐಸಿಸಿ ಕೆಪಿಸಿಸಿ ಹಾಗೂ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಖಂಡರಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ನಿಷ್ಠಾವಂತ ಕಾರ್ಯಕರ್ತನಾದ ನನಗೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಬಿ ಪಾರಂ ಕೊಡಿಸುವಂತೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಶಿವು ಯಾದವ್ ಮನವಿ ಮಾಡಿದ್ದಾರೆ.
2013 ಮತ್ತು 2018 ರಲ್ಲಿ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರಕ್ಕೆ ನಾಮ ಪತ್ರ ಸಲ್ಲಿಸಿದ್ದೆ ಅಂದಿನ ಪಕ್ಷದ ಮುಖಂಡರು ಈಗಿನ ಸಿದ್ದರಾಮಯ್ಯ ಸೇರಿದಂತೆ ಮತ್ತಿತರ ಮುಖಂಡರು ಮುಂದಿನ ಚುನಾವಣೆಯಲ್ಲಿ ಅವಕಾಶ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿ ಹಿಂದಿನ ಎರಡು ಚುನಾವಣೆಗಳಲ್ಲಿ ನಾಮ ಪತ್ರ ವಾಪಸ್ ತೆಗಿಸಿದ್ದರು. ಮುಖಂಡರುಗಳಿಗೆ ಅಂದು ನೀಡಿದ ಭರವಸೆ ನೆನಪಿಲ್ಲ. ಇಂದಿನ ಮುಖಂಡರಿಗೆ ಹಣಬೇಕಂತೆ ನನ್ನಲ್ಲಿ ಐಟಿ ಇಡಿ ರೈಡ್ ಮಾಡುವಷ್ಟು ಹಣವಿಲ್ಲ, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಚುನಾವಣೆ ಮಾಡುವಷ್ಟು ಹಣ ನನ್ನಲ್ಲಿದೆ. ದಯವಿಟ್ಟು ತಾವೆಲ್ಲರೂ ಸೇರಿ ಹಿಂದುಳಿದ ವರ್ಗಗಳ ಕಾಡುಗೊಲ್ಲರ ಸಮಾಜಕ್ಕೆ ಸೇರಿದ ಮತ್ತು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷನಾದ ಹಾಗೂ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲೆಯ ಕಾರ್ಯಾಧ್ಯಕ್ಷ ನಾಗಿ ನೇಮಕವಾಗಿದ್ದ ನನಗೆ ಈ ಬಾರಿ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರಕ್ಕೆ ಬಿ ಪಾರಂ ಕೊಡಿಸಲು ಎಲ್ಲರೂ ಸಹಕರಿಸಬೇಕೆಂದು ಜೊತೆಗೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಅಡಿಯಲ್ಲಿ ಜಿಲ್ಲೆಯಲ್ಲಿ ಬಹುಸಂಖ್ಯಾತ ಕಾಡುಗೊಲ್ಲ ಜನಾಂಗಕ್ಕೆ ನ್ಯಾಯ ಒದಗಿಸುವ ದೃಷ್ಟಿಯಿಂದ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷನಾದ ನನಗೆ ಪಕ್ಷದ ಹಿತದೃಷ್ಟಿಯಿಂದ ಜನಾಂಗದ ಹಿತದೃಷ್ಟಿಯಿಂದ ಪಕ್ಷ ಸಂಘನೆಯ ಭವಿಷ್ಯದ ದೃಷ್ಟಿಯಿಂದ ನನಗೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರಕ್ಕೆ ಬಿ ಪಾರಂ ಕೊಡಿಸಲು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಕೋರಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಘನತೆ ಗೌರವಗಳನ್ನು ಕಾಪಾಡಲು ವಿರೋಧ ಪಕ್ಷಗಳ ವಿರುದ್ಧ ಪ್ರಬಲವಾದ ಸಂಘಟಿತ ಹೋರಾಟ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನೋವು ನಲಿವುಗಳಿಗೆ ಸ್ಪಂದಿಸಲು ಆಶೀರ್ವದಿಸಬೇಕೆಂದು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಶಿವು ಯಾದವ್ ಮನವಿ ಮಾಡಿದ್ದಾರೆ.