i
ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಾಂತ್ರಿಕ ಸಹಾಯಕ ಇಂಜಿನಿಯರ್ ಸೇವೆಯಿಂದ ವಜಾ…
ಚಂದ್ರವಳ್ಳಿ ನ್ಯೂಸ್, ಬೀದರ್:
ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಸವಕಲ್ಯಾಣ ತಾಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಇಂಜಿನಿಯರ್ ಸೂರ್ಯಕಾಂತ ಪಾಟೀಲನನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಆದೇಶಿಸಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮುಡಬಿ ಗ್ರಾಮ ಪಂಚಾಯಿತಿಯ ಬಗದೂರಿ ಗ್ರಾಮದ ರೈತರ ಹೊಲದಲ್ಲಿ ನರೇಗಾದಲ್ಲಿ ಕೈಗೊಂಡ ಕಾಮಗಾರಿ ಬಿಲ್ ಪಾವತಿಗಾಗಿ ತಾಂತ್ರಿಕ ಸಹಾಯಕ ಸೂರ್ಯಕಾಂತ ಪಾಟೀಲ ಬೇಡಿಕೆ ಇಟ್ಟಿದ್ದು 62,748 ಕೂಲಿ ಪಾವತಿಸಲಾಗಿದೆ. ಆದರೆ, ಸೂರ್ಯಕಾಂತ ಪಾಟೀಲ ಬಿಲ್ ಪಾವತಿಸಿಲ್ಲ. ಸರ್ಕಾರದ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ಆರೋಪ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ವರದಿ ಆದರಿಸಿ ಸೂರ್ಯಕಾಂತ ಪಾಟೀಲ ಅವರ ಹೊರಗುತ್ತಿಗೆ ಸೇವೆ ರದ್ದುಗೊಳಿಸಿ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.