i
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಊರಿನ ಸಮೀಪದ ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಮಂದಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ.
ನಂದನಹೊಸೂರು ಗ್ರಾಮದ ನಿವಾಸಿ ಗಿರೀಶ್(18), ಹೊರಕೆರೆದೇವರಪುರ ನಿವಾಸಿ ಸಂಜಯ್(18), ಕಣಿವೆಜೋಗಿಹಳ್ಳಿ ನಿವಾಸಿ ಮನು(19) ಮೃತಪಟ್ಟಿದ್ದು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ.
ಕೆರೆಯಲ್ಲಿ ಈಜಲು ಹೋಗಿದ್ದಾಗ ದುರಂತ ಸಂಭವಿಸಿದೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.