i
ರೈತರಿಗೆ ಕೆಟ್ಟ ಸುದ್ದಿ, ಫಸಲ್ ಭೀಮಾ ಯೋಜನೆ: 687 ಪ್ರಸ್ತಾವನೆಗಳು ತಿರಸ್ಕೃತ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2021-22ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆಯನ್ನು ನೋಂದಾವಣಿ ಮಾಡಿಕೊಂಡ ರೈತರ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿದಾಗ ತಾಳಿಯಾಗದೇ ಇರುವ ಮುಂಗಾರು ಹಂಗಾಮಿನ 203 ಹಾಗೂ ಹಿಂಗಾರು ಹಂಗಾಮಿನ 484 ಪ್ರಸ್ತಾವನೆಗಳು ಸೇರಿದಂತೆ ಒಟ್ಟು 687 ಪ್ರಸ್ತಾವನೆಗಳು ತಿರಸ್ಕøತಗೊಂಡಿವೆ.
ತಿರಸ್ಕøತಗೊಂಡ ರೈತರ ಪಟ್ಟಿಯನ್ನು ಹೋಬಳಿಮಟ್ಟದ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯತಿ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಏಪ್ರಿಲ್ 20 ರವರಗೆ ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡಲಾಗಿದೆ.
ಆಕ್ಷೇಪಣಾ ಅರ್ಜಿಯೊಂದಿಗೆ ರೈತರು 2021-22ನೇ ಸಾಲಿನ ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಶೀದಿ, ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಬೆಳೆ ಮಾರಾಟ ಮಾಡಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಬೇಕು. ಏಪ್ರಿಲ್ 20 ರೊಳಗಾಗಿ ಯಾವುದೇ ಆಕ್ಷೇಪಣೆ ಸಲ್ಲಿಸದೇ ಇದ್ದಲ್ಲಿ ಎಲ್ಲಾ ಪ್ರಸ್ತಾವನೆಗಳು ತಿರಸ್ಕøತಗೊಳ್ಳುತ್ತವೆ ಎಂದು ಕೃಷಿ ಇಲಾಖೆ ಚಿತ್ರದುರ್ಗ ತಾಲ್ಲೂಕು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.