i
ಹಿರಿಯೂರು ಬಿಜೆಪಿಗೆ ಬಿಗ್ ಶಾಕ್, ಮಾಜಿ ನಗರಸಭೆ ಅಧ್ಯಕ್ಷ, ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಬೆಂಗಲಿಗರು ಕಾಂಗ್ರೆಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿದ್ದು ಬಿಜೆಪಿಯ ಪ್ರಮುಖ ಮುಖಂಡರುಗಳು, ವಿವಿಧ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಬೆಂಬಲಿಗರು, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷರು ಸೇರಿದಂತೆ ಅಪಾರ ಬೆಂಗಲಿಗರು ಮಾಜಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೂಲಕ ಬಿಜೆಪಿಗೆ ಮರ್ಮಾಘಾತ ನೀಡಿದ್ದಾರೆ.
ಹಿರಿಯೂರು ನಗರಸಭೆ ಮಾಜಿ ಅಧ್ಯಕ್ಷ ಟಿ ಚಂದ್ರಶೇಖರ್ ಮತ್ತು ಬೆಂಬಲಿಗರು ಹಾಗೂ ಮಾಜಿ ಬಿಜೆಪಿ ಮೋರ್ಚಾ ಜೆಲ್ಲಾ st ಅಧ್ಯಕ್ಷ ಮಂಜುನಾಥ್ ಮತ್ತು ಬೆಂಬಲಿಗರು ಹಾಗೂ ಭೋವಿ ಸಮಾಜದ ಮುಖಂಡರು ಟಿ.ಭೂತಭೋವಿ, ಮಾದಿಗ ಸಮಾಜದ ಮುಖಂಡರಾದ ರಂಗಸ್ವಾಮಿ ವಕೀಲರು ಬಬ್ಬೂರು ಮತ್ತು ರಾಜಾನಯ್ಕ್, ಅರುಣ್ ಅಂಬಲಗೆರೆ ಇವರುಗಳು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಸೇರ್ಪಡೆಯಾದ ಬಹುತೇಕರು ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಸ್ವಜನಪಕ್ಷಪಾತಕ್ಕೆ ಬೇಸತ್ತು ಬಿಜೆಪಿ ತೊರೆಯುತ್ತಿರುವುದಾಗಿ ಹೇಳಿರುವುದು ಹೆಚ್ಚಿನ ಚರ್ಚೆಗೆ ವೇದಿಕೆ ಕಲ್ಪಿಸಿದೆ.