i
ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ, ತುಮಕೂರು ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅಲಿಯಾಸ್ ವಾಸು ಕಾಂಗ್ರೆಸ್ ಸೇರ್ಪಡೆ ಬೆನ್ನಲೇ ತುಮಕೂರು ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ವಾಸು ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಯಾರೊಬ್ಬರನ್ನು ವಿಶ್ವಾಸಕ್ಕೆ ಪಡೆಯದಿರುವುದೇ ಇಂದು ಅಸಮಾಧಾನ ಸ್ಫೋಟವಾಗಲು ಕಾರಣವಾಗಿದೆ. ಜೆಡಿಎಸ್ ಬಿಟ್ಟು ಗುಬ್ಬಿ ಶ್ರೀನಿವಾಸ್ ಅವರು ಕಾಂಗ್ರೆಸ್ಗೆ ಬೆಂಗಳೂರಿನಲ್ಲಿ ಸೇರ್ಪಡೆಯಾದ ಶ್ರೀನಿವಾಸ್ ಪರಿಸ್ಥಿತಿ ನೀರಿನಿಂದ ಮೀನು ಹೊರ ಬಿದ್ದಾಗ ಆಗುವಂತ ಪರಿಸ್ಥಿತಿ ನಿರ್ಮಾಣವಾಗತೊಡಗಿದೆ.
ತುಮಕೂರು ಪ್ರಭಾವಿ ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಸೇರಿದಂತೆ ಮತ್ತಿತರ ಪ್ರಮುಖರನ್ನು ಗುಬ್ಬಿ ಶ್ರೀನಿವಾಸ್ ಅವರ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ಯಾವುದೇ ಅಭಿಪ್ರಾಯ ಪಡೆದುಕೊಂಡಿಲ್ಲ ಎನ್ನಲಾಗಿದೆ. ಇದಲ್ಲದೇ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಪರಮೇಶ್ವರ್ ಸೇರಿದಂತೆ ತುಮಕೂರು ಕಾಂಗ್ರೆಸ್ ಮುಖಂಡರುಗಳಿಗೆ ಆಹ್ವಾನ ಇರಲಿಲ್ಲ ಎನ್ನುವುದು ಮತ್ತೊಷ್ಟು ಆಕ್ರೋಶ ಅಸಮಾಧಾನಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಚುನಾವಣೆ ಹೊತ್ತಿನಲ್ಲಿ ಕಂಡು ಬರುತ್ತಿರುವುದು ವಿಪರ್ಯಾಸವೇ ಸರಿ.