i
ಲೋಕಾಯುಕ್ತ ದಾಳಿ, ಕೆರೆ ಕಾಮಗಾರಿ ಬಿಲ್ ಮಂಜೂರಾತಿಗೆ 1.20 ಲಕ್ಷ ಪಡೆಯುವಾಗ ಇಂಜಿನಿಯರ್ ಬಂಧನ…
ಚಂದ್ರವಳ್ಳಿ ನ್ಯೂಸ್, ಹಾವೇರಿ:
ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಹಾವೇರಿ ತಾಂತ್ರಿಕ ತಜ್ಞ ಅಧಿಕಾರಿಯನ್ನು ಲಂಚದ ಹಣ ಸಮೇತ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲಾ ಕೆರೆಸಂರಕ್ಷಣೆ, ಅಭಿವೃದ್ದಿ ಪ್ರಾಧಿಕಾರದ ತಾಂತ್ರಿಕ ತಜ್ಞ ಅಧಿಕಾರಿ ಶಿವಲಿಂಗಸ್ವಾಮಿ ಹಲಗಲಿಮಠ ಅವರು ಕೆರೆ ಅಭಿವೃದ್ದಿ ಕಾಮಗಾರಿ ಬಿಲ್ ಮಂಜೂರಾತಿಗೆ 2.20 ಲಕ್ಷಕ್ಕೆ ಬೇಡಿಕೆ ಇಟ್ಟು ಸುರೇಶ್ ಕಳಸೂರು ಬಳಿ 1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಘಟನೆ ಸಂಬಂಧ ತಾಂತ್ರಿಕ ತಜ್ಞ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.