i
ಹಾಸನ ಟಿಕೆಟ್ ವಿಚಾರವಾಗಿ ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ದೇವೇಗೌಡರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೆಂಗಳೂರಿನ ಮನೆಗೆ ಆಗಮಿಸಿದ್ದ ಹಾಸನದ ಜೆಡಿಎಸ್ ಕಾರ್ಯಕರ್ತರ ಮುಂದೆ ಕ್ಷೇತ್ರ ಉಳಿಸಿಕೊಳ್ಳುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿ ಕಣ್ಣೀರು ಹಾಕಿದ್ದಾರೆ.
ಇದೇ ಸಂದರ್ಭದಲ್ಲಿ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುತ್ತದೆ ತಾವೆಲ್ಲ ಆ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಕೈ ಮುಗಿದು ಮನವಿ ಮಾಡಿದ್ದಾರೆ.
ಹಾಸನದ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರಕ್ಕಾಗಿ ಭಾರಿ ಗೊಂದಲ ಶುರುವಾಗಿದೆ. ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ ದೇವೇಗೌಡರ ಮಕ್ಕಳ ನಡುವೆಯೇ ಈಗ ಟಿಕೆಟ್ ಹಂಚಿಕೆ ಭಿನ್ನಾಭಿಪ್ರಾಯ ಹುಟ್ಟುಕೊಂಡಿದೆ. 40 ವರ್ಷಗಳಿಂದ ಹಾಸನದಲ್ಲಿ ರಾಜಕೀಯ ಮಾಡಿಕೊಂಡು ಬಂದಿದ್ದರೂ ಕಳೆದ ಬಾರಿ ಸೋಲು ಉಂಟಾಗಿತ್ತು. ಆದರೆ, ಈ ಬಾರಿ ಸ್ವತಃ ದೇವೇಗೌಡರ ಹಿರಿ ಸೊಸೆ ಭವಾನಿ ರೇವಣ್ಣ ತಾವೇ ಸ್ಪರ್ಧೆ ಮಾಡುವಂತೆ ಘೋಷಣೆ ಮಾಡಿಕೊಂಡಿದ್ದಾರೆ. ಆದರೆ, ಮಾಜಿ ಸಿಎಂ ಕುಮಾರಸ್ವಾಮಿ ಕಾರ್ಯಕರ್ತರ ಸ್ವರೂಪ್ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈಗ ಎಚ್.ಡಿ. ರೇವಣ್ಣ ಅವರು ಸ್ವರೂಪ್ಗೆ ಟಿಕೆಟ್ ನೀಡದಂತೆ ಮನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ದೇವೇಗೌಡರಿಗೆ ಟಿಕೆಟ್ ಆಯ್ಕೆಯನ್ನು ಕೈಬಿಟ್ಟಿದ್ದು, ಇಬ್ಬರ ಮಕ್ಕಳ ನಡುವೆ ಗೊಂದಲಕ್ಕೆ ಸಿಲುಕಿದ್ದು, ಬೆಂಗಳೂರಿನ ಮನೆಯಲ್ಲಿ ಹಾಸನ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ದೇವೇಗೌಡರು ಕಣ್ಣೀರು ಹಾಕಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.