i
ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ ಏ.3 ರಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಇತ್ತೀಚೆಗೆ ಬಿಜೆಪಿ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಎನ್ನಲಾಗುತ್ತಿದೆ.
ಬೆಂಗಳೂರು KPCC ಕಚೇರಿಯಲ್ಲಿ ಹಲವು ಬೆಂಬಲಿಗರೊಂದಿಗೆ ಎನ್ ವೈ ಗೋಪಾಲಕೃಷ್ಣ ಸೇರ್ಪಡೆ ಸಾಧ್ಯತೆ ಇದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, CLP ನಾಯಕ ಸಿದ್ದರಾಮಯ್ಯ, ಉಸ್ತುವಾರಿ ಸುರ್ಜೇವಾಲ ನೇತೃತ್ವದಲ್ಲಿ ಏ.3 ರಂದು ಸೋಮವಾರ ಬೆಳಿಗ್ಗೆ 10:30ಕ್ಕೆ ಕಾಂಗ್ರೆಸ್ ಸೇರುವವರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೊನ್ನೆಯಷ್ಠೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗೋಪಾಲಕೃಷ್ಣ ಮೊಳಕಾಲ್ಮೂರು ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದು ಬಹುತೇಕ ಅವರಿಗೆ ಟಿಕೆಟ್ ಅಂತಿಮ ಎನ್ನಲಾಗುತ್ತಿದೆ.