i
ಭೀಕರ ರಸ್ತೆ ಅಪಘಾತ, ತೊಗಲು ಗೊಂಬೆ ಆಟದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಭೀಕರ ರಸ್ತೆ ಅಪಘಾತದಲ್ಲಿ ತೊಗಲು ಗೊಂಬೆ ಆಟದ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವು ಕಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಸಮೀಪದ ತಳಕು ಹತ್ತಿರ ಅವರಿದ್ದ ಕಾರು ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತಕ್ಕೆ ಸಿಲುಕಿ ವೀರಣ್ಣ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಕಾರಿನ ಚಾಲಕನಿಗೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಬೆಳಗಲ್ಲು ವೀರಣ್ಣ ಅವರು, ತೊಗಲು ಗೊಂಬೆಯಾಟದ ಹಿರಿಮೆಯನ್ನು ಸಪ್ತ ಸಾಗರದ ಆಚೆ ತಲುಪಿಸಿದ ಅಪರೂಪದ ಕಲಾವಿದರಾಗಿದ್ದಾರೆ. ಶ್ರೀರಾಮಾಂಜನೇಯ ತೊಗಲು ಗೊಂಬೆ ಕಲಾ ಮೇಳವನ್ನು ಕಟ್ಟಿ ಊರು, ರಾಜ್ಯ, ಹೊರ ರಾಜ್ಯ, ದೇಶ, ವಿದೇಶಕ್ಕೂ ಪ್ರಯಾಣ ಮಾಡಿದ್ದರು.
ಮೃತ ವೀರಣ್ಣ ಅವರು, ತೊಗಲು ಗೊಂಬೆ ಆಟದ ಮೂಲಕ ರಾಜ್ಯ, ದೇಶ ಅಷ್ಟೇ ಅಲ್ಲದೇ, ವಿದೇಶಗಳಲ್ಲಿ ಪ್ರದರ್ಶನ ನೀಡಿ, ಹೆಸರು ಮಾಡಿದ್ದರು.ಹೀಗಾಗಿ ಈ ಕಲಾವಿದ ರಾಷ್ಟ್ರಪತಿ ಪ್ರಶಸ್ತಿ ಗಳಿಸಿದ್ದರು.
ಅವರ ನಿಧನದಿಂದ ರಾಜ್ಯದ ಕಲಾಲೋಕ ಬಡವಾಗಿದೆ. ವೀರಣ್ಣ ಅವರು ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಗಣ್ಯರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.