i
ಭೀಕರ ಅಪಘಾತ, ತಂದೆ ಮಗಳು ಸ್ಥಳದಲ್ಲೇ ಸಾವು…
ಚಂದ್ರವಳ್ಳಿ ನ್ಯೂಸ್, ರಾಮನಗರ:
ಭೀಕರ ರಸ್ತೆ ಅಪಘಾತದಲ್ಲಿ ತಂದೆ ಮತ್ತು ಪುತ್ರಿ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಜರುಗಿದೆ.
ಕಾರೊಂದು ಹಿಂಬದಿಯಿಂದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಕರುಳು ಹಿಂಡುವ ಘಟನೆಯೊಂದು ನಡೆದಿದೆ.
ಮೃತಪಟ್ಟವರನ್ನು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಸಾಬರಪಾಳ್ಯ ಬಳಿ ನಡೆದ ಅಪಘಾತದಲ್ಲಿ ಯೋಗೇಶ್(47) ಹಾಗೂ ಮಗಳು ಹರ್ಷಿತಾ(14) ಎಂದು ಗುರುತಿಸಲಾಗಿದೆ.
ಇವರು ಮಾಗಡಿಯ ಕಲ್ಯಾ ಗ್ರಾಮದ ನಿವಾಸಿಗಳಾಗಿದ್ದು, ತಂದೆ ಮಗಳನ್ನು ಶಾಲೆಗೆ ಬಿಟ್ಟು ಬರಲೆಂದು ಹೋಗುತ್ತಿದ್ದಾಗ ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಅತಿ ವೇಗದ ಚಾಲನೆ ಮತ್ತು ಅಜಾಗರೂಕತೆಯೇ ದುರಂತಕ್ಕೆ ಕಾರಣವಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.