i
ಮುಂದೂಡಲ್ಪಟ್ಟಿದ್ದ ಜೆಡಿಎಸ್ 2ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷ ನಾಯಕ ಕುಮಾರಸ್ವಾಮಿ ಅವರು ಕೆಆರ್ ಪೇಟೆ ಯಿಂದ ಬೆಂಗಳೂರಿಗೆ ಬರುವುದು ತಡವಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ 2ನೇ ಪಟ್ಟಿ ಬಿಡುಗಡೆ ಮುಂದೂಡಿಕೆ ಆಗಿದೆ. ಹೀಗಾಗಿ ಏಪ್ರಿಲ್ 5 ರಂದು ಎರಡನೇ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ. ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಏಪ್ರಿಲ್ 1 ರಂದು ನಡೆದ ಸಂಧಾನ ಸಭೆ ವಿಫಲವಾಗಿದೆ. ಭವಾನಿ ರೇವಣ್ಣ ಅವರಿಗೆ ಹಾಸನ ಟಿಕೆಟ್ ಕೈತಪ್ಪಿದೆ. ಹಾಸನ ಸೇರಿದಂತೆ ಮತ್ತಿತರ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳ ಜೆಡಿಎಸ್ ಪಟ್ಟಿ ಬಿಡುಗಡೆ ಶೀಘ್ರದಲ್ಲೇ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.