i
ಸಿದ್ದರಾಮಯ್ಯ ವಿರುದ್ಧ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಡಾ.ಜಿ.ಪರಮೇಶ್ವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: paramesh vs siddaramaih
ಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಡಾ.ಜಿ.ಪರಮೇಶ್ವರ್ ಅವರು ಕೊರಟಗೆರೆ ಕ್ಷೇತ್ರದಿಂದ ಸೋಲುಕೊಂಡಿದ್ದರು. ಅಂದು ಅವರು ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯ ಸುತ್ತಿ ಪಕ್ಷವನ್ನು ಸ್ಪಷ್ಟ ಬಹುಮತದತ್ತ ಕೊಂಡೊಯ್ದಿದ್ದರು. ಆದರೆ ಅವರು ಸೋಲುಂಡಿದ್ದರಿಂದ ಮುಖ್ಯಮಂತ್ರಿ ಆಗುವ ಯೋಗ ಕಳೆದುಕೊಂಡಿದ್ದರು. ಈ ಸೋಲಿಗೆ ಅಂದು ಸಿದ್ದರಾಮಯ್ಯನವರೇ ಕಾರಣ ಎಂದು ತಿಳಿದಿರುವ ಜಿ.ಪರಮೇಶ್ವರ್ ಇಂದು ಆ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯನವರ ಮನೆ ದೇವರ ಅಪ್ಪಣೆ ಮೇರೆಗೆ 2 ಕಡೆ ಸ್ಪರ್ಧಿಸಿದರೆ ಮಾತ್ರ ಗೆಲುವು ಸುಲಭ ಎನ್ನುವ ಸೂಚನೆಯಿಂದ ಮೈಸೂರಿನ ವರುಣಾ ಕ್ಷೇತ್ರದಿಂದ ಮತ್ತು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
ಈಗಾಗಲೇ ವರುಣಾ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಹೈಕಮಾಂಡ್ ಬಳಿ ಕೋರಿಕೊಂಡಿದ್ದಾರೆ.
ಇದರಿಂದ ಎಚ್ಚೆತ್ತುಕೊಂಡಿರುವ ಡಾ.ಜಿ.ಪರಮೇಶ್ವರ್ ಅವರು ಕೊರಟಗೆರೆ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿದ್ದು ಹಳೆ ಸುದ್ದಿ ಆದರೆ ಈಗ ಸುದ್ದಿ ಏನೆಂದರೆ ಬೆಂಗಳೂರು ನಗರ ವ್ಯಾಪ್ತಿಯ ಪುಲಿಕೇಶಿ ನಗರ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಕಲ್ಪಿಸಿಕೊಂಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಮತ್ತು ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲು ಅವಕಾಶ ಕೊಟ್ಟರೆ ತನಗೂ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಹೈಕಮಾಂಡ್ ಅವಕಾಶ ನೀಡಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಮೂಲಗಳ ಪ್ರಕಾರ ಈ ಬಾರಿಯೂ ಸಿದ್ದರಾಮಯ್ಯ ಅವರಿಗೆ ಸ್ಥಳೀಯ ನಾಯಕರ ವಿರೋಧದ ನಡುವೆಯೂ ಕೋಲಾರದಿಂದಲೂ ಸ್ಪರ್ಧಿಸುವ ಅಕವಾಶವನ್ನು ಹೈಕಮಾಂಡ್ ಸಮ್ಮತಿಸಲಿದೆ ಎಂದು ಹೇಳಲಾಗಿದೆ.
ಮಾಜಿ ಉಪಮುಖ್ಯಮಂತ್ರಿ ಹಾಗೂ ಸುದೀರ್ಘ ಅವಗೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಡಾ.ಜಿ.ಪರಮೇಶ್ವರ್ ಅವರು, ಸಿದ್ದರಾಮಯ್ಯರಿಗೆ ಎರಡು ಕಡೆ ಸ್ಪರ್ಧಿಸಲು ಅವಕಾಶ ನೀಡುವುದಾದರೆ ತಮಗೂ ಕೊರಟಗೆರೆ ಜೊತೆಗೆ ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಎರಡೆರಡು ಕ್ಷೇತ್ರಗಳ ಸ್ಪರ್ಧೆ ಕುರಿತು ಭಾರೀ ಚರ್ಚೆಗೆ ಕಾರಣವಾಗಿದೆ.