i
ಬಿಜೆಪಿಯ ಕೆಲ ಹಾಲಿ ಶಾಸಕರುಗಳಿಗೆ ಟಿಕೆಟ್ ಮಿಸ್, ಆತಂಕದಲ್ಲಿ ಸ್ಪರ್ಧಿಗಳು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೂಕ್ತ ಮತ್ತು ಬಲಿಷ್ಠ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಬಿಜೆಪಿ ಪಕ್ಷವು ಇದೇ ಮೊದಲ ಸಲ ಬಿಜೆಪಿ ಮುಖಂಡರಿಂದ ಆಂತರಿಕ ಮತದಾನ ಮಾಡಿದ್ದು, ಹೊಸ ಪ್ರಯೋಗಕ್ಕೆ ನಾಂದಿ ಹಾಡಿದೆ.
ಆಂತರಿಕ ಮತದಾನದಲ್ಲಿ ಅಭ್ಯರ್ಥಿ ಯಾರೆಂದು ತಿಳಿದು ಟಿಕೆಟ್ ನೀಡಲಾಗುತ್ತದೆ. ಈ ಮಹತ್ವದ ಸಂಗತಿ ಎಂದರೆ ಬಿಜೆಪಿ ಸದಸ್ಯರು ಆಕಾಂಕ್ಷಿಗಳ ಪೈಕಿ ಯಾರ ಹೆಸರನ್ನಾದರೂ ಆಯ್ಕೆ ಮಾಡಲು ಅವಕಾಶ ನೀಡಲಾಗಿತ್ತು. ಈಗಾಗಲೇ ಈ ಮತುಗಳ ಎಣಿಕೆ ನಡೆದಿದೆ ಎನ್ನಲಾಗಿದ್ದು, ಇಂದು ಚುನಾವಣಾ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಟ್ಟಿಯನ್ನು ಪರಿಶೀಲಿಸಿ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸ್ಸು ಮಾಡಲಾಗುತ್ತದೆ. ಮೂಲಗಳ ಪ್ರಕಾರ ಕೆಲವೊಂದು ಕ್ಷೇತ್ರಗಳಲ್ಲಿ ಹಾಲಿ ಕೆಲವು ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ನಿಚ್ಚಳವಾಗಿದದ್ದು ಆಕಾಂಕ್ಷಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ಇದೇ ತಿಂಗಳ ಏಪ್ರಿಲ್ 8ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಅಂದು ಅಭ್ಯರ್ಥಿಗಳನ್ನು ಪಟ್ಟಿಯನ್ನು ಅಂತಿಮಗೊಳಿಸಿ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದರ ಮಧ್ಯೆ ತಮಗೆ ಟಿಕೆಟ್ ಸಿಗದಿದ್ದರೆ ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಆತಂಕದಲ್ಲಿ ಕೆಲ ಶಾಸಕರುಗಳಿದ್ದು ಪರ್ಯಾಯ ಚಿಂತನೆ ಮಾಡುತ್ತಿದ್ದಾರೆ ಎನ್ನಲಾಗಿದ್ದು ಬೇರೆ ಪಕ್ಷಗಳ ಬಾಗಿಲು ಬಡಿಯುವ ಸಾಧ್ಯತೆ ಎನ್ನಲಾಗಿದೆ.