i
ಲೋಕಾಯುಕ್ತ ದಾಳಿ, ಕೃಷಿ ಇಲಾಖೆ ಎಡಿ ಸೇರಿ ಮೂರು ಮಂದಿ ಅಧಿಕಾರಿಗಳು ಜೈಲು ಪಾಲು…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಕೃಷಿ ಇಲಾಖೆ ಪರಿಕರಗಳ ಕಂಪನಿಯ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಕೃಷಿ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ಕುಮಾರ್, ತಾಂತ್ರಿಕ ಮತ್ತು ಕೃಷಿ ಅಧಿಕಾರಿ ಸತೀಶ್ ಹಾಗೂ ಡಿ.ಗ್ರೂಪ್ ನೌಕರ ಅರುಣ್ ನನ್ನು ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣ ಸಮೇತ ಬಂಧಿಸಿದ್ದಾರೆ. ಗುಂಡ್ಲುಪೇಟೆಯ ಎಸ್.ಆರ್.ಟ್ರೇಡರ್ಸ್ ಕಂಪನಿ ಬಿಲ್ಗಳನ್ನು ಮಂಜೂರು ಮಾಡಲು ಕೃಷಿ ಇಲಾಖೆ ಇಬ್ಬರು ಅಧಿಕಾರಿಗಳು 2.5 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರಿಂದ ಈ ಸಂಬಂಧ ಮಾಲೀಕ ಕುಮಾರಸ್ವಾಮಿ, ಕೃಷಿ ಅಧಿಕಾರಿ 1.5 ಲಕ್ಷ ಮತ್ತು ಸಹಾಯಕ ನಿರ್ದೇಶಕ 1 ಲಕ್ಷ ಲಂಚವನ್ನು ಕೇಳುತ್ತಿದ್ದಾರೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಪಡೆದು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಎರಡೂವರೆ ಲಕ್ಷ ರೂ ಲಂಚ ಪಡೆಯುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.