i
ಜಿಲ್ಲಾ ಆಸ್ಪತ್ರೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯ ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಹಾವೇರಿ:
ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಜಿಲ್ಲಾ ಆಸ್ಪತ್ರೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ವೈದ್ಯ ಮತ್ತು ಆಶಾ ಕಾರ್ಯಕರ್ತೆ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಹಾವೇರಿ ಜಿಲ್ಲಾ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ವೈದ್ಯ ಡಾ.ಉಮೇಶ ಕೆಳಗಿನಮನಿ ಮತ್ತು ಆಶಾ ಕಾರ್ಯಕರ್ತೆ ದಾಕ್ಷಾಯಣಿ ಚಿಕ್ಕನಂದಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಸ್ಪೀಕರಿಸುವ ಸಂದರ್ಭದಲ್ಲೇ ದಾಳಿ ಮಾಡಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಸಂತಾನ ಹರಣ ಶಸ್ತ್ರಚಿಕಿತ್ಸೆ ಕೈಗೊಳ್ಳಲು ನಾಲ್ಕು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಎರಡು ಸಾವಿರ ರೂ.ಗಳನ್ನು ಮುಂಗಡವಾಗಿ ಪಡೆದು ಉಳಿದ 2 ಸಾವಿರ ರೂ. ಲಂಚದ ಹಣ ನೀಡುವಂತೆ ಒತ್ತಾಯಿಸಿ ಎರಡು ಸಾವಿರ ಲಂಚ ಸ್ಪೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ವೀರೇಶ ಹಾದರಗೇರಿ ಅವರ ಪತ್ನಿ ರೂಪಾ ಅವರಿಗೆ ಮತ್ತು ಸೋದರಿ ಸಂಬಂಧಿ ಲಕ್ಷ್ಮೀ ಅವರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಲು ಆರೋಪಿಗಳಾದ ಡಾ.ಉಮೇಶ ಮಾಲಿಂಗಪ್ಪ ಕೆಳಗಿನಮನಿ, ಆಶಾ ಕಾರ್ಯಕರ್ತೆ ದ್ರಾಕ್ಷಾಯಣಿ ಪುಟ್ಟಪ್ಪ ಚಿಕ್ಕನಂದಿ ಹಾವೇರಿ ತಾಲೂಕಿನ ಹೊಮ್ಮರಡಿ ಗ್ರಾಮದ ವೀರೇಶ ಹಾದರಗೇರಿ ಇವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಲ್ಲದೆ, ಹೊಸರಿತ್ತಿ ಗ್ರಾಮದಲ್ಲಿರುವ ವೈದ್ಯರ ಮನೆಯ ಮೇಲೂ ಶೋಧ ಕಾರ್ಯ ಮಾಡಿ ಮಹತ್ವ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ. ಹಾವೇರಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.