i
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಖಂಡರು…
ಚಂದ್ರವಳ್ಳಿ ನ್ಯೂಸ್, ಪಾವಗಡ:
ಶಾಸಕ ವೆಂಕಟರಮಣಪ್ಪ, ಪಾವಗಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ವಿ.ವೆಂಕಟೇಶ್, ತಾಲೂಕು ಕಾಂಗ್ರೆಸ್ ನಗರಾಧ್ಯಕ್ಷ ಸುದೇಶ್ಬಾಬು, ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯ ಬೊಮ್ಮತನಹಳ್ಳಿ ರಾಮಾಂಜಿನಪ್ಪ ಸಮ್ಮುಖದಲ್ಲಿ ಇಲ್ಲಿನ ವೆಂಕಟೇಶ್ವರ ಬಡಾವಣೆಯ ಮುಖಂಡರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಕ್ಷೇತ್ರದ ಶಾಸಕ ವೆಂಕಟರಮಣಪ್ಪರಿಂದ ಜನರಿಗೆ ನ್ಯಾಯ ಸಿಗಲಿದೆ. ನಿವೇಶನ ಹಾಗೂ ವಸತಿ ಸೌಲಭ್ಯ ಸೇರಿದಂತೆ ಬಡವರ ಸಂಕಷ್ಟಕ್ಕೆ ನೆರವಾಗುವ ಸೇವಾ ಭಾವನೆವಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ, ಅಭ್ಯರ್ಥಿ ಎಚ್.ವಿ.ವೆಂಕಟೇಶ್ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಹೊಣೆಗಾರಿಕೆ ನಮ್ಮದಾಗಿದೆ ಎಂದು ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಅನೇಕ ಮುಖಂಡರು ತಿಳಿಸಿದ್ದಾರೆ.