i
ಬಿರುಸಿನ ಪ್ರಚಾರ ಕೈಗೊಂಡ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: jds party
ತಾಲೂಕಿನ ಎಂ. ಡಿ. ಕೋಟೆ ಗ್ರಾಮದಲ್ಲಿ ಜೆಡಿಎಸ್ ಸಂಭವನೀಯ ಅಭ್ಯರ್ಥಿ ಎಂ. ರವೀಂದ್ರಪ್ಪನವರು ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು “ಇವತ್ತು ರೈತಸ್ನೇಹಿ ರಾಜಕಾರಣಿಗಳ ಸಾಲಿನಲ್ಲಿ ನಮ್ಮ ಕುಮಾರಸ್ವಾಮಿ ಅಗ್ರಗಣ್ಯರು. ರೈತರ ಉಳಿವು ಮತ್ತು ಬೆಳವಣಿಗೆಗಾಗಿ ಸದಾ ಶ್ರಮಿಸುವ ಅವರು ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತಂದು ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕನಸು ಹೊತ್ತಿದ್ದಾರೆ. ಪಂಚರತ್ನ ಯೋಜನೆಗಳ ಮೂಲಕ ರಾಜ್ಯದ ಅಶಕ್ತ ಜನರ ಬೆನ್ನಿಗೆ ನಿಲ್ಲುವ ಸಂಕಲ್ಪ ಮಾಡಿದ್ದಾರೆ. ಹಾಗಾಗಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿಯವರ ಕೈ ಬಲ ಪಡಿಸುವ ಕೆಲಸ ಮಾಡಬೇಕಿದೆ. ಸತತವಾಗಿ ಮೂರು ಬಾರಿ ಪಕ್ಷವನ್ನು ಸೋಲಿಸಿ ಸಾಕಷ್ಟು ಶಿಕ್ಷೆ ನೀಡಿದ್ದೀರಿ. ಇನ್ನು ಸಾಕು. ಈ ಬಾರಿ ಸ್ಥಳೀಯ ಅಭ್ಯರ್ಥಿಯಾದ ನನ್ನ ಗೆಲುವಿಗೆ ನಿಮ್ಮೆಲ್ಲರ ಕೊಡುಗೆಯಿರಲಿ ” ಎಂದರು. ಈ ಸಂದರ್ಭದಲ್ಲಿ ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಪರಮೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಕಾಂತರಾಜ್, ನಿವೃತ್ತ ಬೆಸ್ಕಾo ಇಂಜಿನಿಯರ್ ತಿಪ್ಪೇಸ್ವಾಮಿ, ಶಾಂತರಾಜ್, ಈರಣ್ಣ, ಆನಂದಪ್ಪ, ರಾಜಣ್ಣ ಮುಂತಾದವರು ಹಾಜರಿದ್ದರು.