i
ಕಾಂಗ್ರೆಸ್ ಸೇರ್ಪಡೆಯಾದ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಂದಿಕೆರೆ ಜಗದೀಶ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಸಾಮಾಜಿಕ ಹೋರಾಟಗಾರ ಹಾಗೂ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಂದಿಕೆರೆ ಜಗದೀಶ್ ಜಾತ್ಯಾತೀತ ಜನತಾದಳ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯ ಜಿ.ಪ್ರೇಮ್ ಕುಮಾರ್, ಕೆಪಿಸಿಸಿ ಸದಸ್ಯ ಅಮೃತೇಶ್ವರ ಸ್ವಾಮಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಎಚ್ ಮಂಜುನಾಥ್, ವಕೀಲ ಶಿವಕುಮಾರ್, ಕೆಆರ್ ಹಳ್ಳಿ ಪಂಚಾಯತಿ ಮಾಜಿ ಸದಸ್ಯ ರವಿ, ಯರಬಳ್ಳಿ ಗ್ರಾಮ ಪಂಚಾಯತಿ ಸದಸ್ಯ ಮಂಜು, ವಿ ವಿ ಪುರ ಗ್ರಾಮ ಪಂಚಾಯತಿ ಸದಸ್ಯ ಅಬ್ದುಲ್ ಮುನ್ನ ಹಾಗೂ ಮತ್ತು ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಮಾನವೀಯತೆ ಮೆರೆದ ಸುಧಾಕರ್-ಹಿರಿಯೂರು ವಿಧಾನಸಭಾ ಕ್ಷೇತ್ರದ ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಯತ್ರಿಪುರ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೋಟರ್ ಸೈಕಲ್ ನಿಂದ ತೆರಳುತ್ತಿದ್ದಾಗ ಅಪಘಾತವಾಗಿ ಬಹಳ ಸಮಯದಿಂದ ನರಳಾಡುತ್ತಿದ್ದ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕೆ ಪ್ರಯಾಣ ಬೆಳೆಸಿದ ಮಾಜಿ ಸಚಿವ ಡಿ ಸುಧಾಕರ್ ನೋಡಿ ತಕ್ಷಣ ಕಾರ್ ನಿಲ್ಲಿಸಿ, ಅವರನ್ನು ಮೇಲೆತ್ತಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಮಾಡಿ ಹಿರಿಯೂರು ಆಸ್ಪತ್ರೆಗೆ ಕಳಿಸಿದರಲ್ಲದೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಸೇರಿ ಎಲ್ಲಾ ರೀತಿಯ ಸಹಾಯ ಮಾಡುವುದರ ಮೂಲಕ ಬಿರುಸಿನ ಪ್ರಚಾರದಲ್ಲೂ ಮಾನವೀಯತೆ ಮೆರೆದಿದ್ದಾರೆ.