i
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರುಗಳ ನೇಮಕಾತಿ ವಿಳಂಬ ನೀತಿಗೆ ಖಂಡನೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷರುಗಳ ನೇಮಕಾತಿ ವಿಳಂಬ ನೀತಿಗೆ ಕರ್ನಾಟಕ ರಾಜ್ಯ ನಿವೃತ್ತ ಪೌರ ಸೇವಾ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್.ನಾರಾಯಣಾಚಾರ್ ಹಿರಿಯೂರು ಅವರು ಖಂಡಿಸಿದ್ದಾರೆ.
ರಾಜ್ಯನಗರ ಸ್ಥಳೀಯ ಸಂಸ್ಥೆಗಳ ಒಂದನೇ ಮೀಸಲಾತಿ ಅವಧಿ ಮುಗಿಯುತ್ತ ಬಂದಿದ್ದು ಎರಡನೇ ಮೀಸಲಾತಿಯನ್ನು ಪ್ರಕಟಿಸದೆ ಸರ್ಕಾರ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿರುವುದು ನ್ಯಾಯಾಂಗ ನಿಂಧನೆಯಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಎರಡನೇ ಮೀಸಲಾತಿಯನ್ನು ಪ್ರಕಟಿಸದೇ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕಲಂ 42 ಉಪಕಲಮ್ (5) ಈ ಕಲಂ ಅನ್ವಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಕ್ರಮವಾಗಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಇವರುಗಳನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಬೇಕಾಗಿರುತ್ತದೆ.
ರಾಜ್ಯ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರೂ ಮನವಿ ಪರಿಗಣಿಸಿಲ್ಲ. ಹಾಗಾಗಿ ಸರ್ಕಾರದ ದೃಷ್ಟಿಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರರುಗಳು ಸ್ವಯಂ ಪ್ರೇರಿತರಾಗಿ ಅಧ್ಯಕ್ಷರುಗಳ ಅಧಿಕಾರವನ್ನು ಪಡೆಯಬೇಕೆಂದು ಸರ್ಕಾರದ ದೃಷ್ಟಿಯಲ್ಲಿ ಇರಬಹುದೆಂದು ಅವರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.