i
ಡಿಕೆಶಿ ಎದುರೇ ಕಾಂಗ್ರೆಸ್ ಕಚೇರಿಯ ಪೀಠೋಪಕರಣ ಪುಡಿ ಪುಡಿ ಮಾಡಿದ ಮುಸ್ಲಿಂ ಮುಖಂಡರು…
ಚಂದ್ರವಳ್ಳಿ ನ್ಯೂಸ್, ಕೋಲಾರ:
ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎದುರೇ ಕೋಲಾರ ಕಾಂಗ್ರೆಸ್ ಕಚೇರಿಯ ಪೀಠೋಪಕರಣಗಳನ್ನು ಮುಸ್ಲಿಂ ಮುಖಂಡರು ಪುಡಿ ಪುಡಿ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ.
ಕಾಂಗ್ರೆಸ್ನಿಂದ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಕೊತ್ತನೂರು ಮಂಜುನಾಥ್ಗೆ ಟಿಕೆಟ್ ಗೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಸಿಟ್ಟಾಗಿರುವ ಮುಸ್ಲಿಂ ಮುಖಂಡರು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಡಿ ಕೆ ಶಿವಕುಮಾರ್ ಎದುರೇ ಗಲಾಟೆ ಮಾಡಿಸಿದ್ದಾರೆ ಎನ್ನಲಾಗಿದೆ.