i
ಚಿತ್ರದುರ್ಗ, ವರುಣಾ, ಅರಸೀಕೆರೆ ಸೇರಿ ಮತ್ತೆ ಆರು ಅಭ್ಯರ್ಥಿಗಳ ಘೋಷಣೆ ಮಾಡಿದ ಜೆಡಿಎಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಅಳೆದು ತೂಗಿ ಬಲಿಷ್ಠ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಎಲ್ಲ ರೀತಿಯ ಕಸರತ್ತು ಮಾಡಿದ್ದು ಮತ್ತೆ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆ ಕ್ಷೇತ್ರಕ್ಕೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರುಗಳನ್ನು ಜೆಡಿಎಸ್ ಅಭ್ಯರ್ಥಿಗಳು ಎಂದು ಮಾಧ್ಯಮ ಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಪ್ರಕಟಿಸಿದರು.
ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರೂ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡ ಬೆನ್ನಲ್ಲೇ ಪಕ್ಷದ ಟಿಕೆಟ್ ಘೋಷಣೆ ಮಾಡಿದ್ದಾರೆ.