i
ಯೋಗೇಶ್ ಬಾಬು ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಿದ ಗೋಪಾಲಕೃಷ್ಣ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಕಾಂಗ್ರೆಸ್ ಟಿಕೆಟ್ ವಂಚಿತ ಡಾ.ಯೋಗೇಶ್ ಬಾಬು ತಮ್ಮ ಮುನಿಸು ಮುರಿದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ವೇಳೆ ಜೊತೆಗಿದ್ದು ನಾಮಪತ್ರ ಸಲ್ಲಿಸುವ ಮೂಲಕ ನಾವೆಲ್ಲಾ ಒಂದಾಗಿದ್ದೇವೆಂದು ತೋರಿಕೊಟ್ಟಿದ್ದಾರೆ.
ಮಂಗಳವಾರ ಬೆಳಿಗ್ಗೆ ಮೊಳಕಾಲ್ಮೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಿಂದ ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ಶಕ್ತಿ ಪ್ರದರ್ಶನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಮತ್ತು ಇತರೆ ನಾಯಕರು ಪಟ್ಟಣದಲ್ಲಿ ಬೃಹತ್ ರೋಡ್ ಶೋ ಕಾರ್ಯಕ್ರಮ ಏರ್ಪಡಿಸಿದ್ದರು.
ಬೃಹತ್ ರ್ಯಾಲಿ ಮೂಲಕ ತಾಲ್ಲೂಕು ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಅವರೊಟ್ಟಿಗೆ ಯೋಗೇಶ್ ಬಾಬು ಸೇರಿ ಹಲವು ನಾಯಕರು ಆಗಮಿಸಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಭಾರೀ ಜನಸ್ತೋಮ ಸೇರಿದ್ದು ಅಪಾರ ಬೆಂಬಲಿಗರೊಂದಿಗೆ ಎನ್.ವೈ.ಗೋಪಾಲಕೃಷ್ಣ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಬೃಹತ್ ರೋಡ್ ಶೋನಲ್ಲಿ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಆಗಮಿಸಿ ಬೆಂಬಲ ಸೂಚಿಸಿದರು.